ದಾವಣಗೆರೆ: ಪ್ರಸಕ್ತ ಸಾಲಿನ ಕೆಇಎ ಮೂಲಕ ವೃತ್ತಿಪರ ಹಾಗೂ ತಾಂತ್ರಿಕ ಕೋರ್ಸುಗಳಲ್ಲಿ ಪ್ರವೇಶ ಪಡೆದ ಕರ್ನಾಟಕ ರಾಜ್ಯದ ಅರ್ಹ ಅಲ್ಪ ಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗಾಗಿ ಶುಲ್ಕ ಮರುಪಾವತಿ, ವಿದ್ಯಾರ್ಥಿವೇತನ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಶುಲ್ಕ ಮರುಪಾವತಿ ಮಾಡಲು ಹಾಗೂ ಮೆಟ್ರಿಕ್ ನಂತರದ ಪದವಿ ಪೂರ್ವ, ಪದವಿ, ಸ್ನಾತಕೋತ್ತರ, ವೃತ್ತಿಪರ ಹಾಗೂ ಎಂಫಿಲ್& ಪಿಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್,ಜೈನ್,ಬೌದ್ಧ,ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗಾಗಿ ಯೋಜನೆಯಡಿ ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನ ಯೋಜನೆಯಡಿ ಎಸ್ ಎಸ್ಪಿ ಪೋರ್ಟಲ್ನಲ್ಲಿ https://ssp.postmetric.karnataka.gov.in/ ಅರ್ಜಿ ಸಲ್ಲಿಸಬಹುದು.ಲರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.inಗೆ ಬೇಟಿ ನೀಡಬಹುದು ಹಾಗೂ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿ ದೂ.ಸಂ :08192-250022,8660520572,9845329483,9880392344 ಗೆ ಸಂಪರ್ಕಿಸಬಹುದೆಂದು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.


