Connect with us

Dvgsuddi Kannada | online news portal | Kannada news online

ದಾವಣಗೆರೆ: ಗ್ರಾ.ಪಂ.ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

DAVANAGERE job 1

ಪ್ರಮುಖ ಸುದ್ದಿ

ದಾವಣಗೆರೆ: ಗ್ರಾ.ಪಂ.ಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ: ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ವಿವಿ. ಘಟಕೋತ್ಸವ; 87 ಚಿನ್ನದ ಪದಕ; 57 ಪಿಎಚ್ ಡಿ, 14,048 ಪದವಿ ಪ್ರದಾನ

18 ರಿಂದ 45 ವರ್ಷ ಒಳಗಿನ ವಯೋಮಾನದವರಾಗಿದ್ದು, ಮಾಸಿಕ ರೂ.9,000/-ಗಳ ಗೌರವಧನ ಆಧಾರದ ಮೇಲೆ ಕೆಲಸ ಮಾಡಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಹಾಗೂ ಕಂಪ್ಯೂಟರ್ ಜ್ಞಾನವುಳ್ಳರಾಗಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 21 ಕೊನೆಯದಿನವಾಗಿರುತ್ತದೆ.

ದಾವಣಗೆರೆ: ಮುಖ್ಯಮಂತ್ರಿ ಪದಕಕ್ಕೆ ಜಿಲ್ಲೆಯ12 ಪೊಲೀಸ್ ಅಧಿಕಾರಿಗಳು ಆಯ್ಕೆ

ದಾವಣಗೆರೆ ತಾಲ್ಲೂಕು ಹುಚ್ಚವ್ವನಹಳ್ಳಿ ಮತ್ತು ಚನ್ನಗಿರಿ ತಾಲ್ಲೂಕಿನ ವಡ್ನಾಳ್ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ವಾಸವಿರುವ ವಿಕಲಚೇತನ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಗಳ ಕಛೇರಿ, ದೇವರಾಜ್ ಅರಸ್ ಬಡಾವಣೆ, ‘ಬಿ’ ಬ್ಲಾಕ್, ಶಿವಾಲಿ ಟಾಕೀಸ್ ಹತ್ತಿರ, ದಾವಣಗೆರೆ ದೂರವಾಣಿ:08192-263939 ಹಾಗೂ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ದಾವಣಗೆರೆ ಮೊ:9590829024 ಮತ್ತು ಚನ್ನಗಿರಿ ತಾಲ್ಲೂಕು ಮೊ:9945738141 ಇವರನ್ನು ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಡಾ.ಡಾ.ಕೆ.ಕೆ ಪ್ರಕಾಶ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top