Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,10,000 ಫಲಾನುಭವಿಗಳ ನೋಂದಣಿ; ಸೇವಾ ಕೇಂದ್ರದಲ್ಲಿ ಹಣ ಕೇಳಿದ್ರೆ ದೂರು ಸಲ್ಲಿಸಿ

n5134423921687934857604dd8629ed5daae7896ddee75a5460f62a19b69f6b84a670f296c83c00ba4cd31e

ದಾವಣಗೆರೆ

ದಾವಣಗೆರೆ: ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1,10,000 ಫಲಾನುಭವಿಗಳ ನೋಂದಣಿ; ಸೇವಾ ಕೇಂದ್ರದಲ್ಲಿ ಹಣ ಕೇಳಿದ್ರೆ ದೂರು ಸಲ್ಲಿಸಿ

ದಾವಣಗೆರೆ: 2023-24 ನೇ ಸಾಲಿನಲ್ಲಿ ಮಹಿಳಾ ಸಬಲೀಕರಣಕ್ಕಾಗಿ ಸರ್ಕಾರದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಿದ್ದು, ಯೋಜನೆಯಡಿ ಜಿಲ್ಲೆಯ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿಗೆ ಮಾಸಿಕ ರೂ 2000 ಗಳನ್ನು ಡಿ.ಬಿ.ಟಿ ಮೂಲಕ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.ಜಿಲ್ಲೆಯಲ್ಲಿ ಅಂದಾಜು 4,50,000 ಫಲಾನುಭವಿಗಳಿದ್ದು, ಸುಮಾರು 1,10,000 ಫಲಾನುಭವಿಗಳ ನೋಂದಣಿ ಕಾರ್ಯ ಪೂರ್ಣಗೊಂಡಿದ್ದು, ಉಳಿದ ಫಲಾನುಭವಿಗಳ ಅರ್ಜಿಗಳನ್ನು ಇನ್ನು ಒಂದು ವಾರದೊಳಗೆ ನೊಂದಣಿ ಮಾಡಲಾಗುತ್ತದೆ.

ಜಿಲ್ಲೆಯಾದ್ಯಂತ ಒಟ್ಟು 411 ನೊಂದಣಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಅರ್ಜಿ ಸಲ್ಲಿಸಲು ಯಾವುದೇ ಕಾಲ ಮಿತಿಯಿರುವುದಿಲ್ಲ ಹಾಗೂ ನೊಂದಣಿಗೆ ಶುಲ್ಕ ಪಾವತಿಸುವಂತಿಲ್ಲ. ಯಾವುದೇ ಕೇಂದ್ರಗಳಲ್ಲಿ ನೋಂದಾಯಿಸಲು ಹಣ ಕೇಳಿದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಪೋಲೀಸ್ ಠಾಣೆ ಅಥವಾ ತಹಶೀಲ್ದಾರರ ಕಚೇರಿ ಸಂಪರ್ಕಿಸಿ ದೂರು ಸಲ್ಲಿಸಲು ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top