ಹರಿಹರ: ನಗರದ ಹೊರವಲಯದ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಆವರಣದಲ್ಲಿ ಜ. 15 ರಂದು ಹರಜಾತ್ರಾ ಮಹೋತ್ಸವ ಹಾಗೂ ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿದೆ.
ಹರಿಹರ; ನಾಳೆ ಈ ಪ್ರದೇಶದಲ್ಲಿ ಬೆ.10ರಿಂದ ಸಂ.5ರವರೆಗೆ ವಿದ್ಯುತ್ ವ್ಯತ್ಯಯ
ಹರ ಜಾತ್ರೆಯ ಭಿತ್ತಿಪತ್ರ ಬಿಡುಗಡೆ ಮಾಡಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಚನಾನಂದ ಸ್ವಾಮೀಜಿ, ಕಿತ್ತೂರ ರಾಣಿ ಚನ್ನಮ್ಮ ದ್ವಿ-ಶತಮಾನ ವಿಜಯೋತ್ಸವದ ಸಮಾರೋಪ ಸಮಾರಂಭ ಹಾಗೂ ಗುರುಪೀಠದ ಶ್ರೀಯವರ ಅಷ್ಟಮ ವಾರ್ಷಿಕ ಪೀಠಾರೋಹಣದಲ್ಲಿ ಸಾಧಕರೊಬ್ಬರಿಗೆ ರಾಣಿ ಚನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ದಾವಣಗೆರೆ: ಮಹಿಳೆ ಸರ ಸುಲಿಗೆ ಮಾಡಿದ ಇಬ್ಬರು ಆರೋಪಿಗಳ ಬಂಧನ; 1.80 ಲಕ್ಷ ಮೌಲ್ಯದ ಮಾಂಗಲ್ಯ ಸರ ವಶ
ಕಿತ್ತೂರ ರಾಣಿ ಚನ್ನಮ್ಮ ಪ್ರಶಸ್ತಿಯ ಸಾಧಕರ ಆಯ್ಕೆಗೆ ಸಮಿತಿ ರಚಿಸಲಾಗುವುದು. ಹರ ಜಾತ್ರೆಯಲ್ಲಿ ವಿವಿಧ ಮಠಾಧೀಶರು, ಸಚಿವರು, ಶಾಸಕರು, ಸಂಸದರು,ಸಮಾಜದ ಮುಖಂಡರು ಭಾಗವಹಿಸುವರು. ರಾಜ್ಯದ ವಿವಿಧ ಭಾಗದಿಂದ 10 ಸಾವಿರ ಜನ ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಮಠದ ಮನವಿಯ ಮೇರೆಗೆ ಕಿತ್ತೂರ ರಾಣಿ ಚನ್ನಮ್ಮಾಜೀ ದ್ವಿ-ಶತಮಾನ ವಿಜಯೋತ್ಸವದ ನಿಮಿತ್ತ ಕೇಂದ್ರ ಸರ್ಕಾರ 200 ಮುಖಬೆಲೆ ನಾಣ್ಯವನ್ನು ಬಿಡುಗಡೆ ಮಾಡಿರುವುದು ಸಂತಸ ಮೂಡಿಸಿದೆ.
ಉತ್ತರಾಯಣ ಪುಣ್ಯ ಕಾಲಕ್ಕೆ ಸೂರ್ಯ ಪಥ ಬದಲಿಸುವ ಮಕರ ಸಂಕ್ರಾಂತಿ ಹಬ್ಬದ ದಿನ ನಡೆಯುವ ಹರಜಾತ್ರೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸೋಮನಗೌಡ್ರು, ಗುರುಪೀಠದ ಪ್ರದಾನ ಟ್ರಸ್ಟಿ ಬಿ.ಸಿ.ಉಮಾಪತಿ, ಆಡಳಿತಾಧಿಕಾರಿ ಡಾ.ಎಚ್.ಪಿ.ರಾಜಕುಮಾರ್, ಹರಜಾತ್ರೆ ಮಹೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಡಾ.ಬಸವರಾಜ್ ವೀರಾಪುರ್, ಪದಾಧಿಕಾರಿಗಳಾದ ಚಂದ್ರಶೇಖರ್ ಪೂಜಾರ್, ಪ್ರಕಾಶ್ ಪಾಟೀಲ್, ಸಂತೋಷ್ ಕುಮಾರ್, ರಶ್ಮಿ ಕುಂಕದ್, ರಾಜೇಶ್ವರಿ ಬಳ್ಳಾರಿ, ಸುಷ್ಮಾ ಪಾಟೀಲ್, ವೀರಣ್ಣ, ಬಸವರಾಜ್ ಇದ್ದರು.



