ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಉಚ್ಚoಗಿದುರ್ಗದ ಶ್ರೀ ಉತ್ಸವಾಂಬ ದೇವಿಗೆ ಕಾಣಿಕೆ ರೂಪದಲ್ಲಿ ಬಂದ ಸೀರೆಗಳ ಹರಾಜು ಪ್ರಕ್ರಿಯೆ ಮೇ 12 ರಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.
ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆ ಧಾರ್ಮಿಕ ದತ್ತಿ ಇಲಾಖೆ ಸಹಾಯಕ ಆಯುಕ್ತ ಎಂ.ಎಚ್. ಪ್ರಕಾಶ್ ರಾವ್ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಈ ಹರಾಜು ಪ್ರಕ್ರಿಯೆ ನಡೆಯಲಿಸೆ. ಈ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವವರೂ 10,000 ರೂ.ಠೇವಣಿಯನ್ನು ದೇವಸ್ಥಾನದ ಕಚೇರಿಯಲ್ಲಿ ಹರಾಜು ಪ್ರಕ್ರಿಯೆ ಪ್ರಾರಂಭವಾಗುವ ಮುಂಚೆ ಕಟ್ಟಬೇಕು. ಹರಾಜಿನಲ್ಲಿ ಪಡೆದ ಸಾಮಗ್ರಿಗಳಿಗೆ ಆ ದಿನವೇ ಹಣವನ್ನು ಪಾವತಿಸಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಎಚ್ ಮಲ್ಲಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



