Connect with us

Dvgsuddi Kannada | online news portal | Kannada news online

ಉಚ್ಚಂಗಿದುರ್ಗ; ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ- ದೇವಾಲಯದಿಂದಲೇ ಚಿನ್ನದ ತಾಳಿ, ಧಾರೆಸೀರೆ ಫ್ರೀ

marriage 768x461 1

ದಾವಣಗೆರೆ

ಉಚ್ಚಂಗಿದುರ್ಗ; ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ- ದೇವಾಲಯದಿಂದಲೇ ಚಿನ್ನದ ತಾಳಿ, ಧಾರೆಸೀರೆ ಫ್ರೀ

ವಿಜಯನಗರ; ಜಿಲ್ಲೆ ಹರಪನಹಳ್ಳಿ ತಾಲ್ಲೂಕಿನ ಉಚ್ಚಂಗಿದುರ್ಗದ ಶಕ್ತಿ ದೇವತೆ ಉಚ್ಚoಗೆಮ್ಮನ ಸನ್ನಿಧಿಯಲ್ಲಿ ಮಾರ್ಚ್ 09 ರಂದು ಉಚಿತವಾಗಿ ಸರಳ ಸಾಮೂಹಿಕ ವಿವಾಹ ನಡೆಯುತ್ತದೆ. ಇದರ ಸದುಪಯೋಗವನ್ನು ಭಕ್ತರೂ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಡೆದುಕೊಳ್ಳಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಚ್.ಮಲ್ಲಪ್ಪ ತಿಳಿಸಿದ್ದಾರೆ.

ವಧು-ವರರು ವಿವಾಹಕ್ಕಾಗಿ ನೊಂದಾಯಿಸಿಕೊಳ್ಳಲು ದೇವಸ್ಥಾನದ ಕಚೇರಿಯನ್ನ ಸಂಪರ್ಕಿಸಬೇಕು. ಈ ಸಾಮೂಹಿಕ ವಿವಾಹದಲ್ಲಿ ಸರಳವಾಗಿ ವಿವಾಹವಾಗುವ ವರನಿಗೆ ಶರ್ಟ್ ಮತ್ತು ಪಂಚೆಗಾಗಿ ಹೂವಿನಹಾರಕ್ಕೆ 5 ಸಾವಿರ ಹಾಗೂ ವಧುವಿಗೆ ಹೂವಿನ ಹಾರ, ಧಾರೆಸೀರೆ ಇತ್ಯಾದಿಗಳಿಗೆ 10 ಸಾವಿರ,ವಧುವಿಗೆ 40 ಸಾವಿರ ಮೌಲ್ಯದ ಚಿನ್ನದ ತಾಳಿ ಮತ್ತು 2 ಗುಂಡುಗಳನ್ನ ದೇವಾಲಯದಿಂದ ಭರಿಸಲಾಗುವುದು.

ಸರಳ ಸಾಮೂಹಿಕ ವಿವಾಹದಲ್ಲಿ ಭಾಗವಹಿಸುವ ಜೋಡಿಗಳ ಸಂಬಂಧಿಕರಿಗೆ ದೇವಸ್ಥಾನದಿಂದ ಊಟ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಉಚ್ಚoಗೆಮ್ಮನ
ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾದ ಎಚ್ ಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top