Connect with us

Dvgsuddi Kannada | online news portal | Kannada news online

ದಾವಣಗೆರೆ: ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡವರಿಗೆ ಯಮರೂಪಿ ಟ್ಯಾಂಕರ್‌ ಲಾರಿ ಡಿಕ್ಕಿ; ಒಬ್ಬ ಸ್ಥಳದಲ್ಲಿಯೇ ಸಾವು-ಇನ್ನೊಬ್ಬನಿಗೆ ಗಂಭೀರ ಗಾಯ

images 94

ದಾವಣಗೆರೆ

ದಾವಣಗೆರೆ: ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡವರಿಗೆ ಯಮರೂಪಿ ಟ್ಯಾಂಕರ್‌ ಲಾರಿ ಡಿಕ್ಕಿ; ಒಬ್ಬ ಸ್ಥಳದಲ್ಲಿಯೇ ಸಾವು-ಇನ್ನೊಬ್ಬನಿಗೆ ಗಂಭೀರ ಗಾಯ

ದಾವಣಗೆರೆ: ಜಿಲ್ಲೆಯ ಹರಿಹರದ ಶಿವಮೊಗ್ಗ-ಹೊಸಪೇಟೆ ಹೆದ್ದಾರಿಯ ಎಪಿಎಂಸಿ ಎದುರು ರಸ್ತೆ ಬದಿ ಬೈಕ್ ನಿಲ್ಲಿಸಿಕೊಂಡು ಮಾತನಾಡುತ್ತಿದ್ದಾಗ ಯಮರೂಪಿಯಾಗಿ ಬಂದ ಟ್ಯಾಂಕರ್‌ ಲಾರಿಯೊಂದು ಡಿಕ್ಕಿ ಹೊಡೆದೆ. ಇದರಿಂದ ಬೈಕ್ ನಲ್ಲಿದ್ದ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನಿಗೆ ಗಂಭೀರವಾಗಿ ಗಾಯಗೊಂಡಿದ್ದಾನೆ.

ಹರಿಹರ ತಾಲ್ಲೂಕಿನ ಬೆಳ್ಳೂಡಿ ಗ್ರಾಮದ ಎಂ.ಎಚ್. ಹನುಮಂತಪ್ಪ (32) ಮೃತಪಟ್ಟವರು. ಇನ್ನೂ ಅದೇ ಗ್ರಾಮದ ಮಹಾದೇವಪ್ಪ ಬಿ.ಎಸ್. ಗಾಯಗೊಂಡವರಾಗಿದ್ದಾರೆ. ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರು ರಸ್ತೆ ಬದಿಯಲ್ಲಿ ಬೈಕ್‌ ನಿಲ್ಲಿಸಿಕೊಂಡ ಮತ್ತೊಬ್ವ ವ್ಯಕ್ತಿ ಜೊತೆ ಮಾತನಾಡುತ್ತಿದ್ದರು. ಆಗ ಯಮರೂಪಿಯಾಗಿ ಮಲೇಬೆನ್ನೂರು ಕಡೆಯಿಂದ ಬೃಹತ್ ಟ್ಯಾಂಕರ್‌ ಲಾರಿ ರಭಸವಾಗಿ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಈ ಡಿಕ್ಕಿಗೆ ಹನುಮಂತಪ್ಪ ಸ್ಥಳದಲ್ಲಿಯೇ ಜೀವ ಚಲ್ಲಿದ್ದಾರೆ. ಹರಿಹರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top