Connect with us

Dvgsuddi Kannada | online news portal | Kannada news online

ದಾವಣಗೆರೆ; ಭೀಕರ ಅಪಘಾತ; ಬೃಹತ್ ಲಾರಿ-ಕಾರು ನಡುವೆ ಡಿಕ್ಕಿ; ಕಾರು ಸಂಪೂರ್ಣ ಜಖಂ; ಚಾಲಕನಿಗೆ ಗಂಭೀರ ಗಾಯ

IMG 20230326 203809

ದಾವಣಗೆರೆ

ದಾವಣಗೆರೆ; ಭೀಕರ ಅಪಘಾತ; ಬೃಹತ್ ಲಾರಿ-ಕಾರು ನಡುವೆ ಡಿಕ್ಕಿ; ಕಾರು ಸಂಪೂರ್ಣ ಜಖಂ; ಚಾಲಕನಿಗೆ ಗಂಭೀರ ಗಾಯ

ದಾವಣಗೆರೆ; ಜಿಲ್ಲೆಯ ಹರಿಹರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿಗೆ ಬೃಹತ್ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಚಾಲಕನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಹರಿಹರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಬೃಹತ್ ಲಾರಿ, ದಾವಣಗೆರೆ ಕಡೆಯಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಹೆದ್ದಾರಿಯಿಂದ ಹರಹರ ಕಡೆ ಹೋಗಲು ರಸ್ತೆ ಕ್ರಾಸ್ ಮಾಡುವಾಗ ಈ ಘಟನೆ ನಡೆದಿದೆ. ಈ ಅಪಘಾತದಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರು ಚಾಲಕನಿಗೆ ತೀವ್ರ ಗಾಯವಾಗಿದ್ದು, ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top