ದಾವಣಗೆರೆ: ಗಣೇಶ ಮೂರ್ತಿ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ಮಚ್ಚು ಪ್ರದರ್ಶಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಇನ್ನೊಬ್ಬ ಪರಾರಿಯಾದ ಘಟನೆ ಜಿಲ್ಲೆಯ ಹರಿಹರ ನಗರದಲ್ಲಿ ನಡೆದಿದೆ.
ಜೈಭೀಮ್ ನಗರದ ನಯಾಜ್ ಅಹಮದ್ (21), ಮಹಮದ್ ನವಾಜ್ (19) ಬಂಧಿತ ಆರೋಪಿಗಳಾಗಿದ್ದಾರೆ. ಪರಾರಿಯಾದ ಇನ್ನೊಬ್ಬ ಆರೋಪಿ ಶೇರ್ ಅಲಿಗಾಗಿ ಪೊಲೀಸರು ಸರ್ಚ್ ಮಾಡುತ್ತಿದ್ದಾರೆ. ಹರಿಹರದ ಜೈಭೀಮ್ ನಗರದ ಗಣೇಶನ ಮೂರ್ತಿಯ ವಿಸರ್ಜನೆ ವೇಳೆ ಈ ಘಟನೆ ನಡೆದಿದೆ.
ಮೆರವಣಿಗೆ ಸರ್ಕಲ್ ಬಳಿ ಬಂದಾಗ ಮೂವರು ಮಚ್ಚು ಎತ್ತಿ ತೋರಿಸಿದ್ದಾರೆ. ಇದು ಸಾರ್ವಜನಿಕ ನೆಮ್ಮದಿಗೆ ಭಂಗ ತಂದಿದ್ದಾರೆ ಎಂದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಜಗದೀಶ ಎಂಬುವರು ನಗರ ಠಾಣೆಗೆ ನೀಡಿದ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಪ್ಪಿಸಿದ್ದಾರೆ.



