ಹರಿಹರದಲ್ಲಿ ಮೊಸಳೆ ಮರಿ ಪ್ರತ್ಯಕ್ಷ; ಜನರಲ್ಲಿ ಆತಂಕ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಮೊಸಳೆ ಮರಿ ಕಂಡು ಬಂದಿದ್ದು, ಇಲ್ಲಿನ ಜನರು ಆತಂಕಗೊಂಡಿದ್ದಾರೆ.

ಹರಿಹರ ನಗರದ ಎಪಿಎಂಸಿಯ ಹಿಂಭಾಗದ ಗಂಗಾನಗರ ವಾರ್ಡ್ ಬಳಿಯ ಭತ್ತದ ಗದ್ದೆಯಲ್ಲಿ ದಾದಾಪೀರ್ ದನಕರುಗಳಿಗೆ ಹುಲ್ಲು ತರಲು ಹೋಗಿದ್ದರು. ಈ ವೇಳೆ ಗಂಗಾನಗರದ ಹಳ್ಳದ ಬಳಿ ಮೊಸಳೆ ಮರಿ ಕಂಡಿದೆ. ಇದನ್ನು ಬಟ್ಟೆಯಲ್ಲಿ ಸುತ್ತಿಕೊಂಡು ತಂದಿದ್ದು, ಗಂಗಾನಗರದ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ.

ಈ ಬಗ್ಗೆ ಕೂಡಲೇ ಅರಣ್ಯ ಇಲಾಖೆಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಅತ್ಯಂತ ಅಪಾಯಕಾರಿಯಾದ ಮೊಸಳೆಯನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ. ಇಲ್ಲಿ ಮೊಸಳೆ ಮರಿ ಸಿಕ್ಕಿರುವ ಹಿನ್ನೆಲೆಒಸಳೆಯೂ ಸಹ ಇರುವ ಸಾಧ್ಯತೆ ಇದ್ದು, ಅರಣ್ಯ ಇಲಾಖೆ‌‌ ಪತ್ತೆ ಕಾರ್ಯಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *