ಹರಿಹರ ಪಂಚಮಸಾಲಿ ಗುರು ಪೀಠಕ್ಕೆ 10 ಕೋಟಿ ಅನುದಾನ ಘೋಷಿಸಿದ ಸಿಎಂ ಯಡಿಯೂರಪ್ಪ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ: ತಾಲ್ಲೂಕಿನ ಹನಗವಾಡಿ ಗ್ರಾಮದಲ್ಲಿರುವ ವೀರಶೈವ ಪಂಚಮಸಾಲಿ ಲಿಂಗಾಯತ ಗುರು ಪೀಠಕ್ಕೆ ವಿವಿಧ ಅಭಿವೃದ್ಧಿ ಕಾರ್ಯಕ್ಕೆ 10 ಕೋಟಿ ರೂಪಾಯಿ ಹಣ ನೀಡುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದರು.

ಹರಜಾತ್ರಾ ಮಹೋತ್ವಸ ಉದ್ಘಾಟಿಸಿ ಮಾತನಾಡಿದ ಅವರು, ಶ್ರೀ ಮಠದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ 10 ಕೋಟಿ ರೂಪಾಯಿ ಅನುದಾನ ನೀಡಲಾಗುವುದು. ನಾಲ್ಕೈದು ದಿನದಲ್ಲಿ ಮಠದ ಖಾತೆಗೆ ಹಣ ಮಂಜೂರು ಮಾಡಲಾಗುವುದು. ಇದರ ಸದುಪಯೋಗವನ್ನು ಪಂಚಮಸಾಲಿ ಮಠ ಪಡೆದುಕೊಳ್ಳಬೇಕು ಎಂದರು.   ಸಚಿವ ಮುರುಗೇಶ್ ನಿರಾಣಿ ಪ್ರಯತ್ನದಿಂದ ಪಂಚಮಸಾಲಿ ಸಮಾಜವನ್ನು ಹಿಂದುಳಿದ ವರ್ಗ ಪಟ್ಟಿಗೆ ಸೇರಿಸಲು ಪ್ರಯತ್ನ ನಡೆಸಲಾಗುವುದು ಎಂದು ತಿಳಿಸಿದರು.

hara jarathra cm

ನಾನು ಸದಾ ಪಂಚಮಸಾಲಿ ಸಮಾಜದ ಜೊತೆಗೆ ಇದ್ದು, ನಾನು ಬೇರೆಯಲ್ಲ, ಸಮಾಜ ಬೇರೆಯಲ್ಲ. ಪಂಚಮಸಾಲಿ ಸಮಾಜ ಕೃಷಿಕ ವರ್ಗವಾಗಿದ್ದು, ವಚನಾನಂದ ಶ್ರೀಗಳ ನೇತೃತ್ವದಲ್ಲಿ ಸಮಾಜ ಅರ್ಥಿಕ, ಸಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಿದೆ. ಪಂಚಮಸಾಲಿ ಸಮಾಜ ಸ್ವಾತಂತ್ರ್ಯ ಹೋರಾಟಗಾರು, ವೀರ ವನಿತೆಯರನ್ನು ಕೊಡುಗೆ ನೀಡಿದೆ.

ಅಕ್ಕಮದೇವಿ, ಕಿತ್ತೂರು ರಾಣಿ ಚೆನ್ನಮ್ಮ ಪಂಚಮಸಾಲಿ ಸಮಾಜದವರು ಎನ್ನುವುದು ಹೆಮ್ಮೆಯಾಗುತ್ತದೆ. ಈ ಸಮಾಜ ಜಗತ್ತಿಗೆ ಸಮಾನತೆ ತತ್ವ ಸಾರಿದ ಬಸವಣ್ಣ ಅವರ ತತ್ವನ್ನು ಪಾಲಿಸುತ್ತಿದೆ.  ಸಮಾನತೆ, ಸಹಬಾಳ್ವೆ, ಸಂಘಟನೆ ಮೂಲಕ ನೇಸರ ಪಥ ಬದಲಿಸುವ ಸಂದರ್ಭದಲ್ಲಿ ಸಂಕ್ರಾಂತಿ ಸಂಭ್ರಮ ಯಶಸ್ವಿಯಾಗಲಿ ಎಂದು ಶುಭ ಕೋರಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *