ದಾವಣಗೆರೆ: ಹರಿಹರ ತಾಲ್ಲೂಕಿನ ಕೊಂಡಜ್ಜಿ ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಕೆಂಚನಹಳ್ಳಿಯ ಕೆ.ಜಿ. ಹನುಮಂತಪ್ಪ, ಉಪಾಧ್ಯಕ್ಷರಾಗಿ ಕುರುಬರಹಳ್ಳಿಯ ಭಾಗ್ಯಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯತ್ ರಾಜ್ ಇಲಾಖೆ ಎಇಇ ಗಿರೀಶ್ ಚುನಾವಣಾಧಿಕಾರಿಯಾಗಿ ಭಾಗವಹಿಸಿದ್ದರು. ಕೊಂಡಜ್ಜಿ ಗ್ರಾ.ಪಂ.ಯಲ್ಲಿ ಒಟ್ಟು 17 ಸದಸ್ಯರಿದ್ದು, 10 ಸದಸ್ಯರು ಅಧ್ಯಕ್ಷ ಚುನಾವಣೆ ಯಲ್ಲಿ ಭಾಗವಹಿಸಿದ್ದರು. 7 ಸದಸ್ಯರು ಗೈರು ಹಾಜರಾಗಿದ್ದರು. ಹೀಗಾಗಿ ಅವಿರೋಧ ಆಯ್ಕೆ ನಡೆಯಿತು. ಈ ಸಂದರ್ಭದಲ್ಲಿ ಪಿಡಿಒ ರಾಮಚಂದ್ರ, ಕಾರ್ಯದರ್ಶಿ ನಟರಾಜ್, ಲೆಕ್ಕಾಧಿಕಾರಿ ನೇತ್ರಾವತಿ, ಮಾಜಿ ಮಂಡಲ ಪ್ರಧಾನ ಭರ್ಮಪ್ಪ, ಮಾಜಿ ಅಧ್ಯಕ್ಷ ಗಂಗಾಧರ್, ತಿಪ್ಪಣ್ಣ, ಮಹಾಂತೇಶ್ ಜೆ.ಎಚ್ ಸೇರಿದಂತೆ ಕೊಂಡಜ್ಜಿ, ಬುಳ್ಳಾಪುರ, ಕೆಂಚನಹಳ್ಳಿ, ಹೊಟ್ಟೆಗನಹಳ್ಳಿ, ಕುರುಬರಹಳ್ಳಿ ಗ್ರಾಮಸ್ಥರು ಭಾಗವಹಿಸಿದ್ದರು.
ಕೊಂಡಜ್ಜಿ: ಗ್ರಾ. ಪಂ ಅಧ್ಯಕ್ಷರ ಚುನಾವಣೆ; ಕೆ.ಜಿ. ಹನುಮಂತಪ್ಪ ಅವಿರೋಧ ಆಯ್ಕೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



