Connect with us

Dvgsuddi Kannada | online news portal | Kannada news online

ಮಲೇಬೆನ್ನೂರು ಹಿಂದೂ ಮಹಾ ಗಣಪತಿ ವಿಸರ್ಜನೆ; ಶಿವಮೊಗ್ಗ-ಹರಿಹರ ವಾಹನ ಸಂಚಾರ ಮಾರ್ಗ ಬದಲಾವಣೆ

ಹರಿಹರ

ಮಲೇಬೆನ್ನೂರು ಹಿಂದೂ ಮಹಾ ಗಣಪತಿ ವಿಸರ್ಜನೆ; ಶಿವಮೊಗ್ಗ-ಹರಿಹರ ವಾಹನ ಸಂಚಾರ ಮಾರ್ಗ ಬದಲಾವಣೆ

ದಾವಣಗೆರೆ: ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದ ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ಪ್ರಯುಕ್ತ ಶಿವಮೊಗ್ಗ-ಹರಿಹರ ರಾಜ್ಯ ಹೆದ್ದಾರಿಯ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಮಲೇಬೆನ್ನೂರಿನಹಿಂದೂ ಮಹಾಗಣಪತಿ ವಿಸರ್ಜನೆಯು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಲೇಬೆನ್ನೂರು ಪಟ್ಟಣದ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ನಡೆಯಲಿದೆ. ಈ ಸಂಬಂಧ ವಾಹನ ಸಂಚಾರ ಮಾರ್ಗಗಳಲ್ಲಿ ಬೆಳಿಗ್ಗೆ 10-00ರಿಂದ ರಾತ್ರಿ 10 ವರೆಗೆ ಬದಲಾವಣೆ ಮಾಡಲಾಗಿರುತ್ತದೆ.

ಮಾರ್ಗ ಬದಲಾವಣೆ: ಹೊನ್ನಾಳಿಯಿಂದ ಹರಿಹರಕ್ಕೆ ಹೋಗುವ ವಾಹನಗಳು ಕೊಮಾರನಹಳ್ಳಿ ಚಾನಲ್ ಮೂಲಕ, ಗುಡ್ಡದ ಬೇವಿನಹಳ್ಳಿ ಗ್ರಾಮ- ಜಿಗಳಿ – ಕುಂಬಳೂರು ಮಾರ್ಗವಾಗಿ ಹರಿಹರಕ್ಕೆ ಹೋಗುವುದು. ಹರಿಹರದಿಂದ ಹೊನ್ನಾಳಿಗೆ ಹೋಗುವ ವಾಹನಗಳು ಕುಂಬಳೂರು ಗ್ರಾಮದ ಮೂಲಕ ನಿಟ್ಟೂರು – ಹರಳಹಳ್ಳಿ ಹಾಲಿವಾಣ ಕೊಮಾರನಹಳ್ಳಿ ಕೆರೆ ಏರಿಯ ಮೂಲಕ ಹೊನ್ನಾಳಿ ಕಡೆಗೆ ಹೋಗಲು ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಹರಿಹರ

To Top