Connect with us

Dvgsuddi Kannada | online news portal | Kannada news online

ಮಲೇಬೆನ್ನೂರು ಹಿಂದೂ ಮಹಾ ಗಣಪತಿ ವಿಸರ್ಜನೆ; ಶಿವಮೊಗ್ಗ-ಹರಿಹರ ವಾಹನ ಸಂಚಾರ ಮಾರ್ಗ ಬದಲಾವಣೆ

ಹರಿಹರ

ಮಲೇಬೆನ್ನೂರು ಹಿಂದೂ ಮಹಾ ಗಣಪತಿ ವಿಸರ್ಜನೆ; ಶಿವಮೊಗ್ಗ-ಹರಿಹರ ವಾಹನ ಸಂಚಾರ ಮಾರ್ಗ ಬದಲಾವಣೆ

ದಾವಣಗೆರೆ: ಹರಿಹರ ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದ ಶ್ರೀ ಹಿಂದೂ ಮಹಾ ಗಣಪತಿ ವಿಸರ್ಜನೆ ಪ್ರಯುಕ್ತ ಶಿವಮೊಗ್ಗ-ಹರಿಹರ ರಾಜ್ಯ ಹೆದ್ದಾರಿಯ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

ಸೆ.21ರಂದು ಮಲೇಬೆನ್ನೂರಿನಹಿಂದೂ ಮಹಾಗಣಪತಿ ವಿಸರ್ಜನೆಯು ಬೆಳಿಗ್ಗೆ 10-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ಮಲೇಬೆನ್ನೂರು ಪಟ್ಟಣದ ಶಿವಮೊಗ್ಗ-ಹರಿಹರ ರಸ್ತೆಯಲ್ಲಿ ನಡೆಯಲಿದೆ. ಈ ಸಂಬಂಧ ವಾಹನ ಸಂಚಾರ ಮಾರ್ಗಗಳಲ್ಲಿ ಬೆಳಿಗ್ಗೆ 10-00ರಿಂದ ರಾತ್ರಿ 10 ವರೆಗೆ ಬದಲಾವಣೆ ಮಾಡಲಾಗಿರುತ್ತದೆ.

ಮಾರ್ಗ ಬದಲಾವಣೆ: ಹೊನ್ನಾಳಿಯಿಂದ ಹರಿಹರಕ್ಕೆ ಹೋಗುವ ವಾಹನಗಳು ಕೊಮಾರನಹಳ್ಳಿ ಚಾನಲ್ ಮೂಲಕ, ಗುಡ್ಡದ ಬೇವಿನಹಳ್ಳಿ ಗ್ರಾಮ- ಜಿಗಳಿ – ಕುಂಬಳೂರು ಮಾರ್ಗವಾಗಿ ಹರಿಹರಕ್ಕೆ ಹೋಗುವುದು. ಹರಿಹರದಿಂದ ಹೊನ್ನಾಳಿಗೆ ಹೋಗುವ ವಾಹನಗಳು ಕುಂಬಳೂರು ಗ್ರಾಮದ ಮೂಲಕ ನಿಟ್ಟೂರು – ಹರಳಹಳ್ಳಿ ಹಾಲಿವಾಣ ಕೊಮಾರನಹಳ್ಳಿ ಕೆರೆ ಏರಿಯ ಮೂಲಕ ಹೊನ್ನಾಳಿ ಕಡೆಗೆ ಹೋಗಲು ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top