ಸಂಭ್ರಮದಿಂದ ಜರುಗಿದ ಮಲೇಬೆನ್ನೂರು ಶ್ರೀ ಬಸವೇಶ್ವರ ರಥೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಹರಿಹರ; ತಾಲ್ಲೂಕಿನ ಮಲೇಬೆನ್ನೂರು ಪಟ್ಟಣದ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.

ಶುಕ್ರವಾರ ಸಂಜೆ (5ಗಂಟೆ) ಗೋಧೂಳಿ ಸಮಯಕ್ಕೆ ಸರಿಯಾಗಿ ರಥತೋತ್ಸವ ನಡೆಯಿತು. ಪಟ್ಟಣದ ಎಲ್ಲ ದೇರುಗಳು ಪಲ್ಲಕಿ ಮೂಲಕ ರಥಕ್ಕೆ ಪ್ರದಕ್ಷಿಣೆ ಹಾಕಿದವು. ತಹಸೀಲ್ದಾರ್‌ ಪೃಥ್ವಿಸಾನಿಕಂ, ಉಪತಹಸೀಲ್ದಾರ್‌ ಆರ್‌. ರವಿ ರಥಕ್ಕೆ ಪೂಜೆ ಸಲ್ಲಿಸಿದರು. ಬಸವೇಶ್ವರ ಸ್ವಾಮಿ ರಥ ಏರಿದ ನಂತರ ಭಕ್ತರು ತೇರಿನ ಗಾಲಿಗೆ ಭಕ್ತರು ತೆಂಗಿನಕಾಯಿ ಹೊಡೆದರು. ಗೋಧೂಳಿ ಸಮಯಕ್ಕೆ ಸರಿಯಾಗಿ ರಥ ಎಳೆಯಲಾಯಿತು. ಭಕ್ತರು ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ರಥ ಸಾಗುವ ಮುಖ್ಯ ರಸ್ತೆ ಉದ್ದಕ್ಕೂ ಕುದುರೆ ಕುಣಿತ, ಹಲಗೆ, ಡೊಳ್ಳು, ನಂದಿಕೋಲು, ಭಜನಾ ಮಂಡಳಿಗಳ ಜಾನಪದ ಕಲಾತಂಡಗಳು ರಥೋತ್ಸವಕ್ಕೆ ಮೆರುಗು ತಂದಿದ್ದವು. ಕಾಲ ಭೈರವ ಯುವಕರ ಸಂಘದಿಂದ ವಿವಿಧೆಡೆ ಭಕ್ತರಿಗೆ ಮಜ್ಜಿಗೆ ವಿತರಿಸಿದರು. ರಥೋ
ತ್ಸವಕ್ಕೂ ಮುನ್ನ ಶ್ರೀಬೀರಲಿಂಗೇಶ್ವರ ಸ್ವಾಮಿಯ ಕಾರ್ಣಿಕ ನಡೆಯಿತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *