ಹರಿಹರ: ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಹರಿಹರ ನಗರದಲ್ಲಿಂದು ಭಾರಿ ಮಳೆಯಾಗಿದೆ. ಭಾರಿ ಮಳೆ ಗಾಳಿಗೆ ಬೃಹತ್ ಗಾತ್ರದ ಮರವೊಂದು ನೆಲಕ್ಕುರುಳಿದ್ದು, ಮರದ ಕೆಳಗೆ ನಿಲ್ಲಿಸಿದ್ದ ನಾಲ್ಕು ವಾಹನಗಳು ಜಖಂಗೊಂಡಿವೆ.
ನಗರದ ಇಂದಿರಾ ಕ್ಯಾಂಟೀನ್ ಸಮೀಪ ಬೃಹತ್ ಮರವೊಂದು ನೆಲಕ್ಕೆ ಉರುಳಿದ ಪರಿಣಾಮ ವಾಹನಗಳು ಜಖಂಗೊಂಡಿವೆ. ಜಿಲ್ಲೆಯಲ್ಲಿ ಕಳೆದ ಎರಡ್ಮೂರು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಅಪಾರ ಪ್ರಮಾಣ ಬೆಳೆ, ಮನೆಗಳಿಗೆ ಹಾನಿಯಾಗಿದೆ. ಇಂದು ಸಹ ಮಳೆ ಮುಂದುವರಿದಿದ್ದು, ಹರಿಹರ ನಗರದಲ್ಲಿ ಭಾರಿ ಮಳೆಯಾಗಿದ್ದು, ಮರವೊಂದು ಬುಡ ಸಮೀತ ನೆಲಕ್ಕೆ ಬಿದ್ದಿದೆ.
ಮರ ಬಿದ್ದ ರಭಸಕ್ಕೆ ಮರದ ಕೆಳಗೆ ನಿಲ್ಲಿಸಿದ್ದ ನಾಲ್ಕು ಕಾರುಗಳು ಸಂಪೂರ್ಣ ಜಖಂಗೊಂಡಿವೆ. ಸದ್ಯ ಮರ ಬಿದ್ದ ಸಮಯದಲ್ಲಿ ವಾಹನದಲ್ಲಿ ಯಾರು ಇರಲ್ಲಿಲ್ಲ. ಹೀಗಾಗಿ ಯಾವುದೇ ಪ್ರಾಣ ಹಾನಿಯಾಗಿಲ್ಲ. ದುಡಿಯುವ ವಾಹನ ಜಖಂ ಆಗಿದ್ದು, ಸರ್ಕಾರ ಪರಿಹಾರ ನೀಡಬೇಕು ಎಂದು ವಾಹನ ಮಾಲೀಕರು ಆಗ್ರಹಿಸಿದ್ದಾರೆ.



