Connect with us

Dvgsuddi Kannada | online news portal | Kannada news online

ದಾವಣಗೆರೆ: ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

death

ಹರಿಹರ

ದಾವಣಗೆರೆ: ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ; ಯುವತಿ ಸ್ಥಳದಲ್ಲೇ ಸಾವು

ದಾವಣಗೆರೆ: ಮೊಬೈಲ್ ನಲ್ಲಿ ಮಾತನಾಡುತ್ತ ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾದ ಪರಿಣಾಮ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಬಳ್ಳಾರಿ ಮೂಲದ ಯುವತಿ ಸಾವು

ಹರಿಹರ ನಗರದ ರೈಲ್ವೆ ಸ್ಟೇಷನ್ ಬಳಿ ನಡೆದಿದೆ.
ಶ್ರಾವಣಿ (23) ಮೃತ ದುರ್ದೈವಿ ಯುವತಿ. ಬಳ್ಳಾರಿ
ಮೂಲದ ಯುವತಿ ಮೈಸೂರಿನಲ್ಲಿ ಎಂಬಿಎ ಓದುತ್ತಿದ್ದ ಯುವತಿ, ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹರಿಹರ ನಗರದ ಸಂಬಂಧಿಕರ ಮನೆಗೆ ಬಂದಿದ್ದರು.

ಯುವತಿಯನ್ನು ಸ್ವೀಕರಿಸಲು ಸಂಬಂಧಿಯೊಬ್ಬರು ರೈಲು ನಿಲ್ದಾಣದಕ್ಕೆ ಬಂದಿದ್ದರು. ಅವರ ಜೊತೆ ಮಾತನಾಡುತ್ತ ನಿಲ್ದಾಣದ ಹಿಂಬದಿಯಿಂದ ರೈಲು ಹಳಿ ದಾಟಿ ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ.

ಯುವತಿಯನ್ನು ರಕ್ಷಿಸಲು ಸಂಬಂಧಿ, ಸಾರ್ವಜನಿಕರು ಪ್ರಯತ್ನಿಸಿದ್ದು, ರೈಲು ಡಿಕ್ಕಿ ಹೊಡೆದ ರಭಸಕ್ಕೆ ಯುವತಿಯ ತಲೆ ಮತ್ತು ಮುಖಕ್ಕೆ ಬಲವಾಗಿ ಪೆಟ್ಟು ಬಿದ್ದಿತ್ತು. ಕೂಡಲೇ ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದು, ಆ್ಯಂಬುಲೆನ್ಸ್ ಬಂದು ಪ್ರಥಮ ಚಿಕಿತ್ಸೆ ನೀಡುವಷ್ಟರಲ್ಲಿ ಯುವತಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಹರಿಹರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

To Top