Connect with us

Dvgsuddi Kannada | online news portal | Kannada news online

ಉಕ್ಕಡಗಾತ್ರಿ ಬಳಿ ತುಂಗಾಭದ್ರ ನದಿಯಲ್ಲಿ ಮುಳುಗಿ ಇಬ್ಬರು ಸಹೋದರಿಯರು ಸಾವು

ದಾವಣಗೆರೆ

ಉಕ್ಕಡಗಾತ್ರಿ ಬಳಿ ತುಂಗಾಭದ್ರ ನದಿಯಲ್ಲಿ ಮುಳುಗಿ ಇಬ್ಬರು ಸಹೋದರಿಯರು ಸಾವು

ದಾವಣಗೆರೆ: ತುಂಗಾಭದ್ರ ನದಿಯಲ್ಲಿ ಸ್ನಾನ ಮಾಡಲು ಹೋಗಿದ್ದ ಇಬ್ಬರು ಸಹೋದರಿಯರು ನೀರುಪಾಲಾಗಿರುವ ಘಟನೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ನಡೆದಿದೆ.

ಉಕ್ಕಡಗಾತ್ರಿ ಅಜ್ಜಯನ ದರ್ಶನಕ್ಕೆ ಬಂದಿದ್ದ ದಾವಣಗೆರೆ ತಾಲೂಕಿನ ಹುಚ್ಚವ್ವನಹಳ್ಳಿ ಗ್ರಾಮದ ಸಹೋದರಿಯರು ತುಂಗಭದ್ರ ನದಿಯಲ್ಲಿ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಈಜು ಬಾರದೇ ಇಬ್ಬರು ಸಹೋದರಿಯರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಚೈತ್ರಾ (19), ಪುಷ್ಪಾ (17) ಎಂಬುವರು ಮೃತಪಟ್ಟಿದ್ದಾರೆ.

ಚೈತ್ರಾ ಅವರಿಗೆ ವಿವಾಹವಾಗಿತ್ತು. ಪುಷ್ಪಾ ದಾವಣಗೆರೆ ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top