ದಾವಣಗೆರೆ: ಬೃಹತ್ ಗಾತ್ರದ ಚರಂಡಿಗೆ ಬಿದ್ದ ಔಷಧಿ ತುಂಬಿದ ವಾಹನ; ಚಾಲಕ ಪ್ರಾಣಾಪಾಯದಿಂದ ಪಾರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹರಿಹರ ನಗರದಲ್ಲಿ ಔಷಧಿ ತುಂಬಿಕೊಂಡು ಹೋಗುವ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಬೃಹತ್ ಗಾತ್ರದ ಚರಂಡಿಗೆ ಬಿದ್ದ ಘಟನೆ ನಡೆದಿದೆ.  ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಘಟನೆ ಹರಿಹರ ನಗರದ ಹಳೆಯ ಪಿಬಿ ರಸ್ತೆಯ ಗೋಪಾಲಕೃಷ್ಣ ಲಾಡ್ಜ್  ಬಿಲ್ಡಿಂಗ್ ಮುಂಭಾಗದಲ್ಲಿ ನಡೆದಿದೆ. ಇಂದು (ಜ.20) ಬೆಳಗ್ಗೆ ಔಷಧಿ ತುಂಬಿಕೊಂಡು ಹೋಗುತ್ತಿದ್ದ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದೆ. ಈ ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.  ವಾಹನವು ಮುಂಭಾಗವು ಜಖಂಗೊಂಡಿದೆ. ಹಳೆ ಪಿಬಿ  ರಸ್ತೆ ಚರಂಡಿ ಕಾಮಗಾರಿಗಳು  ಅಪೂರ್ಣಕೊಂಡು ಸುಮಾರು ವರ್ಷಗಳೇ ಕಳೆದಿವೆ.

ಇಂತಹ ಅಪಘಾತಗಳು ಪದೇ ಪದೇ ಮರುಕಳಿಸುತ್ತಿದ್ದು, ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು  ನಿರ್ಲಕ್ಷವೇ ಕಾರಣ ಸ್ಥಳೀಯರು ಆರೋಪಿಸಿದ್ದಾರೆ. ಈ ರೀತಿಯ ಅವಘಡ ಇನ್ನಷ್ಟು ಆಗುವ ಮುನ್ನವೇ ಅಪೂರ್ಣಗೊಂಡ  ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು  ಸಾರ್ವಜನಿಕರಉ ಆಗ್ರಹಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *