ದಾವಣಗೆರೆ: ಹರಿಹರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಪಂಚಮಸಾಲಿ ಮಠದ ಆವರಣದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಜೂನ್ 01 ರಿಂದ 15 ರವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
ದಾವಣಗೆರೆ: ಈ ಪ್ರದೇಶದಲ್ಲಿ ಬೆ.9ರಿಂದ ಸಂ.5ಗಂಟೆ ವರೆಗೆವಿದ್ಯುತ್ ವ್ಯತ್ಯಯ
ಈ ಸಮಯದಲ್ಲಿ ಮಠದ ಆವರಣದಲ್ಲಿ ಧಾರ್ಮಿಕ ಪೂಜಾ ಕಾರ್ಯಗಳನ್ನು ಹೊರತುಪಡಿಸಿ, ಯಾವುದೇ ರೀತಿಯ ಸಭೆ, ಸಮಾರಂಭಗಳು ಹಾಗೂ ಪತ್ರಿಕಾ ಗೋಷ್ಠಿಗಳನ್ನು ನಡೆಸುವಂತಿಲ್ಲವೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜೆ.ಎಂ ಈ ಆದೇಶವನ್ನು ಹೊರಡಿಸಿದ್ದಾರೆ.
ಕಲಾವಿದರಿಂದ ಅರ್ಜಿ ಆಹ್ವಾನ
ದಾವಣಗೆರೆ: ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (ICCR) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯ ಅನ್ವಯ, ರಾಜ್ಯದ ಕಲಾತಂಡಗಳನ್ನು ಅಂತರರಾಷ್ಟ್ರೀಯ ಮಟ್ಟದ ಸಾಂಸ್ಕೃತಿಕ ಉತ್ಸವಗಳಿಗೆ ಮತ್ತು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಳುಹಿಸಿಕೊಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಈ ಕಾರ್ಯಕ್ರಮಗಳ ಮೂಲಕ ರಾಜ್ಯದ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶಿಸಲು ಮತ್ತು ‘ಎಂಪನೆಲ್’ (Empanel) ಆಗಲು ಉತ್ತಮ ಅವಕಾಶ ದೊರೆಯಲಿದೆ. ಆಸಕ್ತ ಕಲಾವಿದರು ಮತ್ತು ಕಲಾತಂಡಗಳು ಅರ್ಜಿಗಳನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನಾಂಕವಾಗಿದೆ ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಆವರಣ, ದಾವಣಗೆರೆ ಕಚೇರಿಗೆ ಸಲ್ಲಿಸಬೇಕು. ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ಅಧಿಕೃತ ವೆಬ್ಸೈಟ್ www.kannadasiri.karnataka.gov.in ಗೆ ಭೇಟಿ ನೀಡಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.



