ಚಿಗಟೇರಿ ಶ್ರೀ ನಾರದಮುನಿ ರಥೋತ್ಸವ; ತೇರಿನ ಗಾಲಿ‌ಗೆ ಬಿದ್ದು ವೃದ್ಧ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಪ್ರಸಿದ್ಧ ಚಿಗಟೇರಿ ಗ್ರಾಮದ ಶ್ರೀ ನಾರದಮುನಿ ರಥೋತ್ಸವ ಅರ್ಧಕ್ಕೆ ನಿಂತಿದೆ. ತೇರಿನ ಗಾಲಿಗೆ ಬಿದ್ದು ವೃದ್ಧವೊರ್ವ ಸಾವನ್ನಪ್ಪಿದ ಘಟನೆ ನಡೆದೆ. ಈ ಹಿನ್ನೆಲೆ‌ ರಥೋತ್ಸವ ಅರ್ಧಕ್ಕೆ ನಿಲ್ಲಿಸಲಾಯಿತು.

ಚಿಗಟೇರಿ ಗ್ರಾಮದ ಪಕ್ಕದ ಮೈದೂರಿನ ವೃದ್ಧ ಸಾವನ್ನಪ್ಪಿದ್ದಾರೆ. ತೇರು ಎಳೆಯುವಾಗ ಕಾಲು ಜಾರಿ ಗಾಲಿಗೆ ಬಿದ್ದು ಸಾವನ್ನಪ್ಪಿದ್ದಾರೆ.‌ ಶ್ರೀ ನಾರದಮುನಿ‌ ಸ್ವಾಮಿ ರಥ ಏರಿ, ಸ್ವಲ್ಪ ದೂರು ಸಾಗುವಾಗಲೇ ಈ ಘಟನೆ ನಡೆಯಿತು. ತೇರು ನೋಡಲು ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಜನರು ಘಟನೆ ನೋಡಲು ಮುಗಿಬಿದ್ದರು. ತಕ್ಷಣ ಅಲ್ಲೇ ಇದ್ದ ಪೊಲೀಸರು ಜನರನ್ನು ನಿಯಂತ್ರಿಸಿ, ವೃದ್ಧನನ್ನು ಹೊರ ಸಾಗಿಸಿದರು. ವೃದ್ಧ ಸಾವನ್ನಪ್ಪಿದ ಹಿನ್ನೆಲೆ ತೇರನ್ನು ಅಲ್ಲಿಗೆ ನಿಲ್ಲಿಸಲಾಯಿತು.

ಕಳೆದ ಎರಡು ವರ್ಷ ಕೊರೊನಾ ಹಿನ್ನೆಲೆ ರಥೋತ್ಸವ ನಡೆಯದ ಹಿನ್ನೆಲೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರು. ಬೆಳಗ್ಗೆಯಿಂದ ಭಕ್ತರು ಶ್ರೀ ನಾರದಮುನಿ ದೇವರಿಗೆ ಆಯಾ ಬೆಡಗಿನವರು ಪ್ರಸಾದ ಎಡೆ ಮಾಡಿ ಭಕ್ತಿ ಸಮರ್ಪಿಸಿದರು. ನಾರದಮುನಿ‌ ಸ್ವಾಮಿ ತೇರು ಏರುವವರೆಗೂ ಎಲ್ಲವೂ ಸಂಭ್ರಮದಿಂದ ನಡೆದಿತ್ತು. ಆದರೆ, ಕೊನೆಯಲ್ಲಿ ಈ ಘಟನೆ ಸಂಭವಿಸಿದ್ದರಿಂದ ತೇರನ್ನು ಅಲ್ಲಿಗೆ ನಿಲ್ಲಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *