Connect with us

Dvgsuddi Kannada | online news portal | Kannada news online

ಸಂಕ್ರಾಂತಿ ಹಬ್ಬಕ್ಕೆ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುವಾಗ ಲಾರಿ-ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ಸಾವು

IMG 20220116 065056

ದಾವಣಗೆರೆ

ಸಂಕ್ರಾಂತಿ ಹಬ್ಬಕ್ಕೆ ಉಕ್ಕಡಗಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುವಾಗ ಲಾರಿ-ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ಸಾವು

ಹಾವೇರಿ:ಸಂಕ್ರಾಂತಿ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿ ಕರಿಬಸಜ್ಜನ ದೇವಸ್ಥಾನಕ್ಕೆ ಭೇಟಿ ನೀಡಿ ವಾಪಸ್ ಬರುವಾಗಲಲ ಮೆಕ್ಕೆಜೋಳ ತುಂಬಿದ ಲಾರಿ ಮತ್ತು ಎರಡು ಕಾರುಗಳ‌ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲೇ ಇಬ್ಬರು ಸಾವನ್ನಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಮೃತರು ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಮತ್ತಿಕೋಟಿ ಗ್ರಾಮದವರು. ಶಂಕರಗೌಡ (35), ಶಾಂತಮ್ಮ (32) ಹಾಗೂ ಬಾಲಕರಾದ ಪುನೀತ್ (12) ಮತ್ತು ರಘು (14) ಮೃತಪಟ್ಟವರು. ಘಟನೆಯಲ್ಲಿ ಇತರ ಆರು ಜನರು ಗಂಭೀರ ಗಾಯಗೊಂಡಿದ್ದು, ರಟ್ಟಿಹಳ್ಳಿ ತಾಲೂಕಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಎರಡು ಕಾರು ಮತ್ತು ಮೆಕ್ಕೆಜೋಳ ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಒಂದರ ಹಿಂದೊಂದು ಚಲಿಸುತ್ತಿದ್ದ ಕಾರುಗಳಿಗೆ ನಿಯಂತ್ರಣ ತಪ್ಪಿದ ಲಾರಿ ಡಿಕ್ಕಿ ಹೊಡೆದಿದೆ ಎರಡು ಕಾರುಗಳಲ್ಲಿಯೂ ಒಂದೇ ಕುಟುಂಬದವರಾಗಿದ್ದ ಸೋದರ ಸಂಬಂಧಿಗಳಿದ್ದರು. ರಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top