Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಾಳೆಯಿಂದ ಎರಡು ದಿನ ಆಯುರ್ವೇದ ಆರೋಗ್ಯ ಮೇಳ; ಉಚಿತ ತಪಾಸಣೆ

ದಾವಣಗೆರೆ

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ನಾಳೆಯಿಂದ ಎರಡು ದಿನ ಆಯುರ್ವೇದ ಆರೋಗ್ಯ ಮೇಳ; ಉಚಿತ ತಪಾಸಣೆ

ದಾವಣಗೆರೆ: ಶ್ರೀ ಧನ್ವಂತರಿ ಆಯುರ್ವೇದ ಔಷಧ ಪ್ರತಿನಿಧಿಗಳ ಸಂಘದಿಂದ ನಗರದ ಹದಡಿ ರಸ್ತೆಯ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಕಲ್ಯಾಣ ಮಂಟಪದಲ್ಲಿ ಆ. 31 ಮತ್ತು ಸೆ. 1 ಆರೋಗ್ಯ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಬಿ. ಮಧು ಕುಮಾರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆಯುರ್ವೇದದ ತಜ್ಞ ವೈದ್ಯರಿಂದ ಉಚಿತ ತಪಾಸಣೆ ಮತ್ತು ಆಪ್ತ ಸಮಾಲೋಚನೆ ನಡೆಸಲಾಗುವುದು. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು. ಮೇಳದಲ್ಲಿ 30ಕ್ಕೂ ಹೆಚ್ಚು ಆಯುರ್ವೇದ ಔಷಧ ಮಳಿಗೆಗಳನ್ನು ಹಾಕಲಾಗುವುದು. ಸಿರಿಧಾನ್ಯ, ವಿವಿಧ ಆಹಾರ ಧಾನ್ಯಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.ಸನಾತನ ಸಂಸ್ಕೃತಿಯ ಅನಾವರಣ ಮಾಡಲಾಗುವುದು.

ವೈದ್ಯರಿಂದ ಗೋಷ್ಠಿ, ಚಿಕಿತ್ಸೆಯ ಪ್ರಾತ್ಯಕ್ಷಿಕೆ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ರಕ್ತ ಪರೀಕ್ಷೆ, ಮೂಳೆ ಸಾಂದ್ರತೆ ತಪಾಸಣೆ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳಿಗಾಗಿ ಫಾರ್ಮಾ ವೇದ ಎಂಬ ಕಾರ್ಯಾಗಾರ ನಡೆಯಲಿದೆ.ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಚ್. ಅಣ್ಣಯ್ಯ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಯೋಗೇಂದ್ರ ಕುಮಾರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದರು. ಇಂದಿನ ಒತ್ತಡದ ಜೀವನಶೈಲಿಯ ನಡುವೆ ಆರೋಗ್ಯ ಕಾಪಾಡಿಕೊಳ್ಳಲು ಆಯುರ್ವೇದ ಚಿಕಿತ್ಸೆ ಉಪಯುಕ್ತವಾಗಿದೆ.

ಸಾರ್ವಜನಿಕರಿಗೆ ಆರೋಗ್ಯ ಜಾಗೃತಿ ಮೂಡಿಸುವುದು ಮೇಳದ ಉದ್ದೇಶವಾಗಿದೆ ಎಂದು ಹೇಳಿದರು. ಸಂಘದ ಉಪಾಧ್ಯಕ್ಷ ಜಿ. ಅಮರೇಶ್, ಸಹ ಕಾರ್ಯದರ್ಶಿ ಎನ್. ರಾಜೇಶ್, ಖಜಾಂಚಿ ಎ. ರಾಜೇಶ ಕುಮಾರ್ ‌ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top