Connect with us

Dvgsuddi Kannada | online news portal | Kannada news online

ದಾವಣಗೆರೆ: 5 ವರ್ಷದೊಳಗಿನ ಮಗುವಿಗೆ ಸೆ.12 ರಿಂದ 16 ರವರೆಗೆ ಮಿಷನ್ ಇಂದ್ರ ಧನುಷ್ ಲಸಿಕಾಕರಣ

images 2023 08 06T070806.007

ದಾವಣಗೆರೆ

ದಾವಣಗೆರೆ: 5 ವರ್ಷದೊಳಗಿನ ಮಗುವಿಗೆ ಸೆ.12 ರಿಂದ 16 ರವರೆಗೆ ಮಿಷನ್ ಇಂದ್ರ ಧನುಷ್ ಲಸಿಕಾಕರಣ

ದಾವಣಗೆರೆ: ಮಿಷನ್ ಇಂದ್ರಧನುಷ್ ಲಸಿಕಾಕರಣವು ಸೆ.12 ರಿಂದ 16 ರವೆಗೆ ನಡೆಯಲಿದ್ದು, ಅಂಗನವಾಡಿಗಳಿಲ್ಲದ ಜನ ವಸತಿ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರನ್ನು ನೇಮಿಸಿ ಇಂದ್ರಧನುಷ್ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ.ಎಂ.ವಿ ತಿಳಿಸಿದರು.

ಸೆಪ್ಟಂಬರ್ 5 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಸಿದ ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ಡಿಟಿಎಫ್‍ಐ ಸಭೆಯ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿ ದಾವಣಗೆರೆ ಜಿಲ್ಲೆಯಲ್ಲಿ 2017ರಲ್ಲಿ ಇಂದ್ರಧನುಷ್ ಅಭಿಯಾನವು ಪ್ರಾರಂಭವಾಗಿರುತ್ತದೆ. 5 ವರ್ಷದೊಳಗಿನ ಲಸಿಕೆ ವಂಚಿತ ಮಕ್ಕಳನ್ನು ಗುರುತಿಸಿ ಇಂದ್ರಧನುಷ್ ಲಸಿಕೆ ನೀಡಲಾಗುತ್ತಿದೆ. ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆದ ಮಕ್ಕಳ ಮಾಹಿತಿ ಸಂಗ್ರಹಿಸಬೇಕು ಎಂದು ತಿಳಿಸಿದರು.

ಈಗಾಗಲೇ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಈ ಕಾರ್ಯಕ್ರಮವು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕೆಂದರು.ಲಸಿಕೆ ನೀಡುವಾಗ ಯಾವುದೇ ಲೋಪದೋಷ ಬಾರದಂತೆ ಮತ್ತು ತಾಯಂದಿರಿಗೆ ಲಸಿಕೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಮಕ್ಕಳಿಗೆ ಲಸಿಕೆ ಕೊಡಬೇಕು. ಆರೋಗ್ಯ ಇಲಾಖೆಯು ಕ್ರಿಯಾತ್ಮಾಕ ಜಾಹೀರಾತು ನೀಡುವ ಮೂಲಕ ಜನರಲ್ಲಿ ಲಸಿಕೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಈ ಅಭಿಯಾನದಲ್ಲಿ ಲಸಿಕೆ ಪಡೆಯದೇ ವಂಚಿತರಾಗಿರುವ, ಬಿಟ್ಟು ಹೋಗಿರುವ, ಪ್ರದೇಶಗಳು ಮತ್ತು ಸಮುದಾಯಗಳನ್ನು ಗುರುತಿಸಿ ಅವರಿಗೆ ಇಂದ್ರಧನುಷ್ ಲಸಿಕೆ ಹಾಕಲು ಗುರಿಯನ್ನು ಹೊಂದಬೇಕು ಎಂದರು.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು ಮೊದಲನೆ ಹಂತ ಆಗಸ್ಟ್ 7 ರಿಂದ 12 ರವರೆಗೆ, ಎರಡನೇ ಹಂತ ಸೆಪ್ಟೆಂಬರ್ 12 ರಿಂದ 16ರವರೆಗೆ ಮತ್ತು ಮೂರನೇ ಹಂತ ಅಕ್ಟೋಬರ್ 9 ರಿಂದ 14 ರವರೆಗೆ ಈ ತಿಂಗಳುಗಳಲ್ಲಿ ನಿರ್ಧಿಷ್ಟ 6 ದಿನಗಳಂದು ಸಾರ್ವತ್ರಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ತೀವ್ರತರವಾದ ಮಿಷನ್ ಇಂದ್ರಧನುಷ್ 5.0 ರಲ್ಲಿ ನೀಡಲಾದ ಲಸಿಕೆಗಳ ವಿವರವನ್ನು ಪೋರ್ಟಲ್ ನಲ್ಲಿ ದಾಖಲಿಸಿ ಇ-ಲಸಿಕಾಕರಣದ ಪ್ರಮಾಣ ಪತ್ರ ಸೃಜಿಸಲಾಗುವುದು. ಲಸಿಕೆ ಬಾಕಿ ಇರುವ, ಲಸಿಕೆ ಬಿಟ್ಟು ಹೋಗಿರುವ, ಲಸಿಕೆ ವಂಚಿತರಾಗಿರುವ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಲಸಿಕೆ ಹಾಕಿಸುವಲ್ಲಿ ಎಲ್ಲರ ಸಹಕಾರ ಮಹತ್ವದಾಗಿರುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಇಲಾಖೆಗಳು ಸಂವಹನ ತಂತ್ರಜ್ಞಾನ ಅಭಿವೃದ್ಧಿಗೆ ಬೆಂಬಲ ನೀಡಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಯೋಜನಾಧಿಕಾರಿ ಮಲ್ಲನಾಯ್ಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ವಾಸಂತಿ ಉಪ್ಪಾರ, ಹಾಗೂ ಆರೋಗ್ಯಾಧಿಕಾರಿ ಉಪಸ್ಥಿತಿರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top