Connect with us

Dvgsuddi Kannada | online news portal | Kannada news online

ದಾವಣಗೆರೆ: ಗುಡುಗು ಸಿಡಿಲು ಸಹಿತ ಭಾರೀ ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ; ಜನ ಜೀವನ ಅಸ್ತವ್ಯಸ್ತ

rain pic

ದಾವಣಗೆರೆ

ದಾವಣಗೆರೆ: ಗುಡುಗು ಸಿಡಿಲು ಸಹಿತ ಭಾರೀ ಮಳೆ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು ; ಜನ ಜೀವನ ಅಸ್ತವ್ಯಸ್ತ

ದಾವಣಗೆರೆ: ದಾವಣಗೆರೆ ನಗರದಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದ್ದು, ಮಳೆಯ ಅಬ್ಬರದಿಂದ ತಗ್ಗು ಪ್ರದೇಶಗಳಿಗೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದ್ದು, ತಗ್ಗು ಪ್ರದೇಶ ಜನರ ಜೀವನ ಅಸ್ತವ್ಯಸ್ತವಾಗಿದೆ.

ಕಳೆದ ಒಂದು ವಾರದಿದಂದ ಜಿಲ್ಲೆಯಲ್ಲಿ ಬಿಟ್ಟು ಬಿಡೆದೆ ಮಳೆಯಾಗುತ್ತಿದ್ದು, ಜಿಲ್ಲೆಯ ಜನರು ಮಳೆಯ ಅರ್ಭಟಕ್ಕೆ ರೋಸಿ ಹೋಗಿದ್ಧಾರೆ. ನಗರ ಜಯದೇವ ವೃತ್ತ, ವಿದ್ಯಾರ್ಥಿ ಭವನ, ಎವಿಕೆ ರಸ್ತೆ, ಮಹಾನಗರ ಪಾಲಿಕೆ , ವಿನೋಬ ನಗರ, ರಿಂಗ್ ರಸ್ತೆ, ಆಂಜನೇಯ ಬಡಾವಣೆ, ಶಾಮನೂರು, ತರಳಬಾಳು ಬಡಾವಣೆ, ಕೆಬಿ ಬಡಾವಣೆ, ಎಸ್ಎಸ್ ಬಡಾವಣೆ, ಹಳೇ ದಾವಣಗೆರೆ, ಬೇತೂರು ರಸ್ತೆ, ಹೊಂಡದ ಸರ್ಕಲ್, ಕೊಂಡಜ್ಜಿ ರಸ್ತೆ, ದೇವರಾಜ ಅರಸು ಬಡಾವಣೆ, ಜಿಲ್ಲಾಧಿಕಾರಿ ಕಚೇರಿ,  ಎಪಿಎಂಸಿ ಮಾರುಕಟ್ಟೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸತತ ಒಂದು ತಾಸಿಗೂ ಹೆಚ್ಚು ಹೊತ್ತಿನಿಂದ  ಮಳೆಯಾಗುತ್ತಿದೆ.

ಜಿಲ್ಲೆಯಲ್ಲಿ ಅ.11 ರಂದು 23.23 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಅದ  ರಲ್ಲೂ ಹರಿಹರದಲ್ಲಿ ಭಾರೀ ಮಳೆಯಾಗಿದೆ. ಇದರಿಂದ ಒಟ್ಟು ರೂ.59.35 ಲಕ್ಷ ರೂ. ನಷ್ಟವಾಗಿದೆ ಎಂದು  ಅಂದಾಜು ಮಾಡಲಾಗಿದೆ. ಚನ್ನಗಿರಿ 24.87 ಮಿ.ಮೀ, ದಾವಣಗೆರೆ 8.31 ಮಿ.ಮೀ, ಹರಿಹರ 50.25 ಮಿ.ಮೀ, ಹೊನ್ನಾಳಿ 18.70 ಮಿ.ಮೀ, ಜಗಳೂರು ತಾಲ್ಲೂಕಿನಲ್ಲಿ 14.06 ಮಿ.ಮೀ ಮಳೆಯಾಗಿದೆ. ಹರಿಹರ ತಾಲ್ಲೂಕು ವ್ಯಾಪ್ತಿಯಲ್ಲಿ 6 ಪಕ್ಕಾ ಮನೆಗೆ ತೀವ್ರ ಹಾನಿಯಾಗಿದ್ದು, ರೂ.22.00 ಲಕ್ಷ, 1 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು ರೂ.0.80 ಲಕ್ಷ ಹಾಗೂ 2 ಕಚ್ಚಾ ಮನೆ ತೀವ್ರ ಹಾನಿಯಾಗಿದ್ದು, ರೂ.10.00 ಲಕ್ಷ, 1 ದನದ ಕೊಟ್ಟಿಗೆ ಹಾನಿಯಾಗಿದ್ದು ರೂ.0.05 ಲಕ್ಷ ಒಟ್ಟು ರೂ.32.85 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ.

ನ್ಯಾಮತಿ ತಾಲ್ಲೂಕು ವ್ಯಾಪ್ತಿಯಲ್ಲಿ 2 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ.0.50 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ 3 ಪಕ್ಕಾ ಮನೆ ತೀವ್ರಹಾನಿಯಾಗಿದ್ದು ರೂ.7.20 ಲಕ್ಷ, 6 ಪಕ್ಕಾ ಮನೆ ಭಾಗಶ: ಹಾನಿಯಾಗಿದ್ದು, ರೂ. 3.00 ಲಕ್ಷ ಮತ್ತು 9 ಕಚ್ಚಾ ಮನೆಗೆ ತೀವ್ರಹಾನಿಯಾಗಿದ್ದು, ರೂ.12.80 ಲಕ್ಷ, 4 ಕಚ್ಚಾ ಮನೆ ಭಾಗಶ: ಹಾನಿಯಾಗಿದ್ದು, ರೂ. 1.80 ಲಕ್ಷ ಹಾಗೂ 10 ಎಕರೆ ಮೆಕ್ಕೆಜೋಳದ ಬೆಳೆ ಹಾನಿಯಾಗಿದ್ದು, ರೂ. 1.20 ಲಕ್ಷ ಒಟ್ಟು 26.00 ಲಕ್ಷ ಅಂದಾಜು ನಷ್ಟ ಸಂಭವಿಸಿರುತ್ತದೆ. ಸರ್ಕಾರದ ಮಾರ್ಗಸೂಚಿ ಅನ್ವಯ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮ ವಹಿಸಲಾಗುವುದೆಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top