ದಾವಣಗೆರೆ: ಪೂರ್ಣ ಪ್ರಮಾಣದ ಹೆಲ್ಮೆಟ್ ಕಡ್ಡಾಯ ವಿರೋಧಿಸಿ ನಾಳೆ (ಫೆ.27) ಧೂಡಾ ಅಧ್ಯಕ್ಷ ದಿನೇಶ್ ಕೆ ಶೆಟ್ಟಿ ನೇತೃತ್ವದಲ್ಲಿ ಸಮಾಲೋಚನೆ ಸಭೆ ಆಯೋಜಿಸಲಾಗಿದೆ. ಫೆ.27ರಂದು ಸಂಜೆ 5 ಗಂಟೆಗೆ ನಗರದ ಹೈಸ್ಕೂಲ್ ಮೈದಾನದಲ್ಲಿರುವ ಬ್ಯಾಸ್ಕೆಟ್ಬಾಲ್ ಗೌಂಡಿನಲ್ಲಿ ಸಭೆ ನಡೆಯಲಿದೆ.
ದಾವಣಗೆರೆ: ಇನ್ಮುಂದೆ ಐಎಸ್ ಐ ಮಾರ್ಕ್ ಹೆಲ್ಮೆಟ್ ಕಡ್ಡಾಯ ; 5 ಸಾವಿರಕ್ಕೂ ಹೆಚ್ಚು ಹಾಫ್ ಹೆಲ್ಮೆಟ್ ವಶ
ಐಎಸ್ ಐ ಮಾರ್ಕ್ ಹೆಲ್ಮೆಟ್ ಹಾಕುವುದು ಕಡ್ಡಾಯ ಮಾಡಿರುವ ಕುರಿತು ಸಮಾಲೋಚನಾ ಸಭೆಯನ್ನು ಏರ್ಪಡಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ದಿನೇಶ್ ಕೆ ಶೆಟ್ಟಿ ತಿಳಿಸಿದ್ದಾರೆ. ಬೇಸಿಗೆಯಲ್ಲಿ ಹೆಲ್ಮೆಟ್ ಕಡ್ಡಾಯದಿಂದ ವಾಹನ ಚಾಲಕರಿಗೆ ಬಹಳ ತೊಂದರೆ ಆಗುತ್ತಿರುವುದರಿಂದ ಮಳೆಗಾಲದ ತನಕ ಮುಂದೂಡಬೇಕೆಂದು ಪೊಲೀಸ್ ಇಲಾಖೆಗೆ ಮನವಿ ಪತ್ರ ಕೊಡಲಾಗುವುದು ಎಂದು ತಿಳಿಸಿದ್ದಾರೆ.



