Connect with us

Dvgsuddi Kannada | online news portal | Kannada news online

ದಾವಣಗೆರೆ: ಹಿಟ್ ಅಂಡ್ ರನ್ ಕೇಸ್ ; ಜಿಲ್ಲೆಯಲ್ಲಿ 25 ಪ್ರಕರಣಗಳ ಮೃತ, ಗಾಯಾಳುಗಳಿಗೆ ಪರಿಹಾರ ವಿತರಣೆ; ಎಸ್ಪಿ ಮಾಹಿತಿ

davangere sp 1

ದಾವಣಗೆರೆ

ದಾವಣಗೆರೆ: ಹಿಟ್ ಅಂಡ್ ರನ್ ಕೇಸ್ ; ಜಿಲ್ಲೆಯಲ್ಲಿ 25 ಪ್ರಕರಣಗಳ ಮೃತ, ಗಾಯಾಳುಗಳಿಗೆ ಪರಿಹಾರ ವಿತರಣೆ; ಎಸ್ಪಿ ಮಾಹಿತಿ

ದಾವಣಗೆರೆ: ಜಿಲ್ಲಾ ಪೊಲೀಸ್ ವತಿಯಿಂದ ರಸ್ತೆ ಅಪಘಾತಗಳಲ್ಲಿ ಜಿಲ್ಲೆಯಲ್ಲಿ 25 ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತರ ಕುಟುಂಬ ಹಾಗೂ ಗಾಯಾಳುಗಳಿಗೆ ಜಿಲ್ಲಾಧಿಕಾರಿಗಳಿಂದ ಪರಿಹಾರ ಕೊಡಿಸಲಾಗಿದೆ ಎಂದು ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.

ಗಾಯಗೊಂಡ್ರೆ 50 ಸಾವಿರ, ಮೃತಪಟ್ರೆ 2 ಲಕ್ಷ ಪರಿಹಾರ

ಕೇಂದ್ರ ಸರ್ಕಾರವು ಹೊರಡಿಸಿರುವ ಅಧಿಸೂಚನೆಯಲ್ಲಿ ಮೋಟಾರು ವಾಹನ ಕಾಯ್ದೆ-1988ರಡಿ, ಸೆಕ್ಷನ್ 161 ರಲ್ಲಿ ‘‘Compensation to victims of Hit and Run Motor Accidents Schems, 2022’’ ರ ಸೊಲಾಟಿಯಂ ಯೋಜನೆಯಡಿ ರಸ್ತೆ ಅಪಘಾತಗಳ ಹಿಟ್ & ರನ್ ಪ್ರಕರಣಗಳಲ್ಲಿ ಗಾಯಗೊಂಡವರಿಗೆ ರೂ.50,000/- ಗಳನ್ನು ಮತ್ತು ಮೃತಪಟ್ಟ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ರೂ.2,00,000/-ಗಳ ಪರಿಹಾರ ಮೊತ್ತವನ್ನು ನೀಡಲಾಗುತ್ತದೆ.

ಅದರಂತೆ 2024ನೇ ಸಾಲಿನಿಂದ ಈವರೆಗೆ ದಾವಣಗೆರೆ ಜಿಲ್ಲಾ ಪೊಲೀಸ್ ವತಿಯಿಂದ ಒಟ್ಟು 25 ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮೃತರ ಕುಟುಂಬ ಹಾಗೂ ಗಾಯಾಳುಗಳಿಗೆ ಜಿಲ್ಲಾಧಿಕಾರಿಗಳಿಂದ ಪರಿಹಾರಕೊಡಿಸಲಾಗಿದೆ.

ಸದರಿ ಯೋಜನೆಯಡಿಯಲ್ಲಿ ಸಾರ್ವಜನಿಕರು ರಸ್ತೆ ಅಪಘಾತಗಳ ಹಿಟ್ & ರನ್ ಪ್ರಕರಣಗಳಲ್ಲಿ ಗಾಯಗೊಂಡಿದ್ದರೆ ಗಾಯಗೊಂಡವರಿಗೆ ಅಥವಾ ಮೃತಪಟ್ಟಿದ್ದರೇ ಅವರ ಅವಲಂಬಿತ ಕುಟುಂಬದ ಸದ್ಯರುಗಳಿಗೆ ನೀಡಲಾಗುವ ಪರಿಹಾರವನ್ನು ಮೇಲ್ಕಂಡಂತೆ ಗಾಯಗೊಂಡವರಿಗೆ ರೂ.50,000/- ಗಳನ್ನು ಮತ್ತು ಮೃತಪಟ್ಟ ಅವಲಂಬಿತ ಕುಟುಂಬದ ಸದಸ್ಯರುಗಳಿಗೆ ರೂ.2,00,000/-ಗಳ ಪರಿಹಾರ ಮೊತ್ತವನ್ನು ನೀಡಲಾಗುತ್ತದೆ. ದಿನಾಂಕ: 01-04-2022 ರಿಂದ ಈ ಯೋಜನೆ ಜಾರಿಗೆ ಬಂದಿರುತ್ತದೆ.

ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಮನವಿ

ಸಾರ್ವಜನಿಕರು ದಿನಾಂಕ: 01-04-2022 ರಿಂದ ನಂತರದ ರಸ್ತೆ ಅಪಘಾತಗಳ ಹಿಟ್ & ರನ್ ಪ್ರಕರಣಗಳಲ್ಲಿ ನೊಂದವರು ಸಂಬಂಧಪಟ್ಟ ಠಾಣಾಧಿಕಾರಿಗಳನ್ನು ಭೇಟಿ ಪ್ರಕರಣದ ಬಗ್ಗೆ ಮಾಹಿತಿ ಪಡೆದು, ರಸ್ತೆ ಅಪಘಾತ ಪ್ರಕರಣದ ಪರಿಹಾರ ಪಡೆಯಲು ಸ್ಥಳೀಯ ತಹಶಿಲ್ದಾರ್ ರವರಲ್ಲಿ ಅಗತ್ಯ ದಾಖಲೆಗಳನ್ನು ನೀಡಿ ಮನವಿ ಸಲ್ಲಿಸಿ ಸದರಿ ಯೋಜನೆಯ ಸದುಪಯೋಗ ಪಡಿಸಿಕೊಳ್ಳಲು ಸಾರ್ವಜನಿಕರಿಗೆ ಎಸ್ಪಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top