Connect with us

Dvgsuddi Kannada | online news portal | Kannada news online

ದಾವಣಗೆರೆ: ಮನೆ ಇಲ್ಲದವರು ಮನೆ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾ. 31 ಕೊನೆ ದಿನ

ದಾವಣಗೆರೆ

ದಾವಣಗೆರೆ: ಮನೆ ಇಲ್ಲದವರು ಮನೆ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಮಾ. 31 ಕೊನೆ ದಿನ

ದಾವಣಗೆರೆ:  ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ, ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ (ವಸತಿ) ನಿರ್ಮಾಣ ಯೋಜನೆ ಕಲ್ಪಿಸುವ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ. 31 ರವರೆಗೆ ವಿಸ್ತರಿಸಿದೆ.

ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಸಮುದಾಯಗಳ ಜನಾಂಗದವರಿಂದ ವಸತಿ ರಹಿತ, ನಿವೇಶನ ಹೊಂದಿದ ಫಲಾಪೇಕ್ಷಿಗಳಿಗೆ ಮನೆ ನಿರ್ಮಿಸಿಕೊಡಲು ಮನೆ (ವಸತಿ) ನಿರ್ಮಾಣ ಯೋಜನೆ ಕಲ್ಪಿಸುವ ಯೋಜನೆಗೆ ಆನ್‍ಲೈನ್ ಅಥವಾ ಆಫ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾ. 15 ಕೊನೆಯ ದಿನವಾಗಿತ್ತು. ಇದೀಗ ಸಮುದಾಯದ ಅನೇಕ ಮುಖಂಡರುಗಳ ಕೋರಿಕೆಯ ಮೇರೆಗೆ ಆಫ್‍ಲೈನ್ ಅಥವಾ ಆನ್‍ ಲೈನ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.31 ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ 08192 233309 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top