ದಾವಣಗೆರೆ: ದೇವಸ್ಥಾನ ಪೂಜಾರಿ ಭೀಕರ ಹತ್ಯೆ; ಘಟನಾ ಸ್ಥಳಕ್ಕೆ ಎಸ್ಪಿ ಭೇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಹೊನ್ನಾಳಿ ಪಟ್ಟಣದ ಕೆಂಚೆದೇವರ ಬೀರಲಿಂಗೇಶ್ವರ ದೇವಾಲಯದ ಪೂಜಾರಿ ಎಚ್. ಕೆ. ಕುಮಾರ್ ( 40 ) ಅವರನ್ನು ಹೊರ ವಲಯದ ಎಚ್. ಕಡದಹಳ್ಳಿ ಸಮೀಪ ಭೀಕರವಾಗಿ ಹತ್ಯೆ ಮಾಡಲಾಗಿದೆ.

ಬೀರಲಿಂಗೇಶ್ವರ ದೇವಸ್ಥಾನದ ಪೂಜಾ ಕಾರ್ಯ ಮೂಲಕ ಕುಮಾರ್  ಪಟ್ಟಣದಲ್ಲಿ ಚಿರಪರಿಚಿತರಾಗಿದ್ದರು. ದುಷ್ಕರ್ಮಿಗಳು ಪಟ್ಟಣದ ಹೊರ ವಲಯದ ಜಮೀನೊಂದರಲ್ಲಿ ಭೀಕರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ  ಘಟನಾ ಸ್ಥಳಕ್ಕೆ  ಪೋಲಿಸ್ ಅಧೀಕ್ಷಕ  ಸಿ.ಬಿ.ರಿಷ್ಯಂತ್  ಭೇಟಿ ನೀಡಿ ಪರಿಶೀಲಿಸಿದರು. ಕೊಲೆ ಪ್ರಕರಣದ ತನಿಖಾಧಿಕಾರಿಗಳಿಗೆ ಸೂಕ್ತವಾಗಿ ತನಿಖೆ ನಡೆಸುವಂತೆ  ಸೂಚನೆ  ನೀಡಿದರು. ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್.ಬಿ.ಬಸರಗಿ,  ಚನ್ನಗಿರಿ ಡಿವೈಎಸ್ಪಿ ಸಂತೋಷ ಕೆ.ಎಂ., ಹೊನ್ನಾಳಿ ಸಿಪಿಐ ದೇವರಾಜ್  ಉಪಸ್ಥಿತರಿದ್ದರು.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *