Connect with us

Dvgsuddi Kannada | online news portal | Kannada news online

ದಾವಣಗೆರೆ; ರೌಡಿಶೀಟರ್ ಕೊಲೆ ಪ್ರಕರಣ; ಆರೋಪಿಗಳಿಗೆ ನೆರವು ನೀಡಿದ ಮಾಧ್ಯಮ ಪ್ರತಿನಿಧಿ ವಶಕ್ಕೆ ಪಡೆದ ಪೊಲೀಸರು

ಪ್ರಮುಖ ಸುದ್ದಿ

ದಾವಣಗೆರೆ; ರೌಡಿಶೀಟರ್ ಕೊಲೆ ಪ್ರಕರಣ; ಆರೋಪಿಗಳಿಗೆ ನೆರವು ನೀಡಿದ ಮಾಧ್ಯಮ ಪ್ರತಿನಿಧಿ ವಶಕ್ಕೆ ಪಡೆದ ಪೊಲೀಸರು

ದಾವಣಗೆರೆ: ಜಿಲ್ಲೆಯ ಚೀಲೂರು ಬಳಿ ನಡೆದಿದ್ದ ರೌಡಿಶೀಟರ್ ಕೊಲೆ ಪ್ರಕರಣದ ಆರೋಪಿಗಳಿಗೆ ನೆರವು ನೀಡಿದ್ದ ಆರೋಪದಲ್ಲಿ ಖಾಸಗಿ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದ ಮಾಧ್ಯಮ ಪ್ರತಿನಿಧಿಯನ್ನು ನ್ಯಾಮತಿ ಪೊಲೀಸರು ಧಾರವಾಡದಲ್ಲಿ ಬಂಧಿಸಿದ್ದಾರೆ.

ಧಾರವಾಡದ ಮಾಧ್ಯಮ ಪ್ರತಿನಿಧಿ ಮೆಹಬೂಬ್ ಮುನವಳ್ಳಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಶಿವಮೊಗ್ಗದ ರೌಡಿಶೀಟರ್ ಹಂದಿ ಅಣ್ಣಿ ಕೊಲೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗಿ ವಾಪಸ್ ಆಗುತ್ತಿದ್ದ ಹರಿಹರ ತಾಲ್ಲೂಕಿನ ಭಾನುವಳ್ಳಿ ಗ್ರಾಮದ ಆಂಜನೇಯ (30) ಹತ್ಯೆಯಾಗಿತ್ತು. ಇನ್ನೊಬ್ಬ ಮಧು ಗಾಯಗೊಂಡು ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಇಬ್ಬರ ಮೇಲೆ ಗುಂಪೊಂದು ಸ್ಕಾರ್ಪಿಯೋ ಕಾರಿನಲ್ಲಿ ಹಿಂಬಾಲಿಸಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಚೀಲೂರು ಬಳಿ ಕೊಲೆ ಘಟನೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆರೋಪಿಗಳ ಬಗ್ಗೆ ಮಾಹಿತಿ ತಿಳಿದಿದ್ದರೂ, ಪೊಲೀಸರ ತನಿಖೆಗೆ ಅಸಹಕಾರ ನೀಡಿದ ಮೆಹಬೂಬ್ ಮುನವಳ್ಳಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ಮಾಹಿತಿ ನೀಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top