Connect with us

Dvgsuddi Kannada | online news portal | Kannada news online

ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಗೆಲುವು ಅಸಾಧ್ಯ; ಕಾಂಗ್ರೆಸ್‌ಗೆ ವೋಟು ಹಾಕಿದರೆ ಸಿದ್ದರಾಮಯ್ಯಗೆ ಮತ ಹಾಕಿದಂತೆ

ದಾವಣಗೆರೆ

ಹೊನ್ನಾಳಿಯಲ್ಲಿ ರೇಣುಕಾಚಾರ್ಯ ಗೆಲುವು ಅಸಾಧ್ಯ; ಕಾಂಗ್ರೆಸ್‌ಗೆ ವೋಟು ಹಾಕಿದರೆ ಸಿದ್ದರಾಮಯ್ಯಗೆ ಮತ ಹಾಕಿದಂತೆ

ದಾವಣಗೆರೆ: ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಎಷ್ಟೇ ಹಣ ಖರ್ಚು ಮಾಡಿದರೂ, ಈ ಬಾರಿ ಗೆಲುವು ಅಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್‌ಗೆ ವೋಟು ಹಾಕಿದರೆ ಸಿದ್ದರಾಮಯ್ಯರಿಗೆ ಮತ ಹಾಕಿದಂತೆ. ಸಿದ್ದರಾಮಯ್ಯರಿಗೆ ಅಧಿಕಾರ ಬರಬೇಕಾದರೆ ಕಾಂಗ್ರೆಸ್ ಪಕ್ಷ ಗೆಲ್ಲಿಸಿ. ಹಸ್ತದ ಗುರುತಿಗೆ ಮತ ಹಾಕಿ. ನೀವು ಮಾತ್ರ ಮತ ಚಲಾಯಿಸುವುದಲ್ಲ. ಬೇರೆಯವರನ್ನೂ ಕರೆತಂದು ಕಾಂಗ್ರೆಸ್‌ಗೆ ಮತ ಹಾಕಿಸಬೇಕು ಎಂದರು.

ಹೊನ್ನಾಳಿಯಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿ, ರೇಣುಕಾಚಾರ್ಯ ಭಾರೀ ನಾಟಕ ಮಾಡುತ್ತಾನೆ. ಲಂಚ ಹೊಡೆದು ಮನೆ ಕಟ್ಟಿದ್ದಾನೆ. ಇಂತವನು ಎಂಎಲ್‌ಎ ಆಗಬೇಕಾ. ಎಷ್ಟೇ ಹಣ ಖರ್ಚು ಮಾಡಿದರೂ ರೇಣುಕಾಚಾರ್ಯ ಗೆಲ್ಲಲ್ಲ. ಈ ಸಲ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದರು.

ಹೊನ್ನಾಳಿ ಕ್ಷೇತ್ರದಿಂದ ಐವರು ಆಕಾಂಕ್ಷಿಗಳಿದ್ದಾರೆ. ಮಾಜಿ ಶಾಸಕ ಶಾಂತನಗೌಡ, ಹೆಚ್. ಬಿ. ಮಂಜಪ್ಪ, ಉಮಾಪತಿ, ವಿಶ್ವನಾಥ ಸೇರಿ ಐವರು ಆಕಾಂಕ್ಷಿಗಳಿದ್ದಾರೆ. ಇವರಲ್ಲಿ ಎಲ್ಲರಿಗೂ ಟಿಕೆಟ್ ಕೊಡಲು ಆಗಲ್ಲ. ಪಕ್ಷದ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಹಾಗೂ ಸರ್ವೇ ರಿಪೋರ್ಟ್ ನೋಡಿ ಒಬ್ಬರಿಗೆ ಟಿಕೆಟ್ ಕೊಡುತ್ತೇವೆ. ಕಾರ್ಯಕರ್ತರೂ ಸಹ ಈ ನಿಟ್ಟಿನಲ್ಲಿ ಕೆಲಸ ಮಾಡಿ ಎಂದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top