ದಾವಣಗೆರೆ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಏಕಾಏಕಿ ರಸ್ತೆ ಪಕ್ಕದ ಗುಂಡಿಗೆ ಪಲ್ಟಿಯಾಗಿದೆ. ಟ್ರ್ಯಾಕ್ಟರ್ ನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ ದುರ್ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನಲ್ಲಿ ನಡೆದಿದೆ.
ಹೊನ್ನಾಳಿಯ ಬೇಲಿಮಾಲೂರು ಗ್ರಾಮದ ಕಬ್ಬಿನ ಕೆರೆ ಬಳಿ ಈ ಘಟನೆ ನಡೆದಿದೆ. ಈ ಭೀಕರ ಅಪಘಾತದಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ ಮರಿಲಿಂಗಣ್ಣಾರ್ ಬೀರೇಶ್ ಸ್ಥಳದಲ್ಲಿಯೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಗ್ರಾಮದ ನೂರಾರು ಜನ ಜಮಾಯಿಸಿದ್ದರು. ಗ್ರಾಮಸ್ಥರು ಕೂಡಲೇ ಜೆಸಿಬಿ ಮೂಲಕ ಮೃತ ದೇಹಗಳನ್ನು ಹೊರ ತೆಗೆದುದ್ದಾರೆ. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



