ದಾವಣಗೆರೆ: ಅದ್ಧೂರಿಯಾಗಿ ಗಣರಾಜ್ಯೋತ್ಸವ ಆಚರಣೆಗೆ ಜಿಲ್ಲಾಧಿಕಾರಿ ‌ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜನವರಿ 26 ರಂದು ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದರು.

ದಾವಣಗೆರೆ: ತ್ರೈಮಾಸಿಕ ಕೆಡಿಪಿ ಸಭೆ | ದುರಸ್ಥಿಯಾದ ಶುದ್ದ ಕುಡಿಯುವ ನೀರಿನ ಘಟಕ; ಪರಿಕರ ಲ್ಯಾಬ್‍ನಲ್ಲಿ ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಸೂಚನೆ

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸ ಆಚರಿಸುವ ಸಲುವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ. 26ರಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಲಿದ್ದು,ಶಾಲಾ ಮಕ್ಕಳು, ಎನ್‍ಸಿಸಿ, ಪೆÇಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ಅಲ್ಲದೆ ನಾನಾ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಿ ಎಂದರು.

ದಾವಣಗೆರೆ: ಒಳ‌ಮೀಸಲಾತಿ ವಿರುದ್ಧ ಬಂಜಾರ ಸಮುದಾಯ ಕಿಡಿ; ಸಿಎಂ ಸಿದ್ದರಾಮಯ್ಯ, ಸಚಿವರು ಸೇವಾಲಾಲ್‌ ಜಯಂತ್ಯುತ್ಸವ ವೇದಿಕೆ ಏರಲು ಬಿಡಲ್ಲ

ಕಾರ್ಯಕ್ರಮದ ಸಿದ್ದತೆ ಕುರಿತು ಕ್ರೀಡಾಂಗಣದ ಸ್ವಚ್ಚತೆ, ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ದತೆ ಕೈಗೊಳ್ಳಬೇಕು. ದೇಶ ಪ್ರೇಮ ಬಿಂಬಿಸುವ ಹಾಡುಗಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಬೇಕು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್‍ನಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು. ಹಾಗೂ ಆರೋಗ್ಯ ಇಲಾಖೆ ವತಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರವನ್ನು ತೆರೆಯಬೇಕು. ಅಲ್ಲದೆ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಬಹಳ ಅಚ್ಚುಕಟ್ಟಾಗಿ ಯಶಸ್ವಿಯಾಗಿ ನೆರವೇರಿಸಬೇಕು ಎಂದು ತಿಳಿಸಿದರು.

ಪ್ರತಿಯೊಂದು ಕಚೇರಿಯ ಮುಂದೆ ಜ. 26ರಂದು ರಾಷ್ಟ್ರಧ್ವಜ ಹಾರಿಸುವುದು ಕಡ್ಡಾಯ. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *