ದಾವಣಗೆರೆ: ಅಂಚೆ ಇಲಾಖೆಯವಿಭಾಗೀಯ ಡಾಕ್-ಅದಾಲತ್ ಕಾರ್ಯಕ್ರಮ ಸೆ.08 ರಂದು ಮ.04 ಗಂಟೆಗೆ ದಾವಣಗೆರೆಯ ಅಂಚೆ ಅಧೀಕ್ಷಕರ ಪ್ರಧಾನ ಅಂಚೆ ಕಚೇರಿಯ ಮೊದಲನೇ ಮಹಡಿಯಲ್ಲಿ ಆಯೋಜಿಸಲಾಗಿದೆ.
ಸಾರ್ವಜನಿಕರು ಮತ್ತು ಅಂಚೆ ಗ್ರಾಹಕರು ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಮತ್ತು ಸಲಹೆಗಳನ್ನು ಸೆ.07 ರಂದು ಅಥವಾ ಅದಕ್ಕಿಂತ ಮುಂಚಿತವಾಗಿ ಅಂಚೆ ಅಧೀಕ್ಷಕರ ಕಚೇರಿಗೆ ತಲುಪುವಂತೆ ಕಳುಹಿಸಬೇಕೆಂದು ಅಂಚೆ ಅಧೀಕ್ಷಕರಾದ ಓ.ವಿರೂಪಾಕ್ಷಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



