Connect with us

Dvgsuddi Kannada | online news portal | Kannada news online

ದಾವಣಗೆರೆ: ಶೆಟ್ಟರ್ ರಾಜೀನಾಮೆಯಿಂದ ಯಾವುದೇ ಎಫೆಕ್ಟ್ ಆಗಲ್ಲ ; ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

IMG 20240125 200959

ದಾವಣಗೆರೆ

ದಾವಣಗೆರೆ: ಶೆಟ್ಟರ್ ರಾಜೀನಾಮೆಯಿಂದ ಯಾವುದೇ ಎಫೆಕ್ಟ್ ಆಗಲ್ಲ ; ಸಚಿವ ಎಸ್. ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಬಿಟ್ಟಿದ್ದು ಯಾವುದೇ ಎಫೆಕ್ಟ್ ಆಗಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರೆ.

ಸುದ್ದಿಗಾರ ಜೊತೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಆಗ ಅವರಿಂದ ಏನೂ ಲಾಭ ಆಗಿರಲಿಲ್ಲ. ಅವರಿಂದ ಹೇಳಿಕೊಳ್ಳುವಂತ ಬದಲಾವಣೆ ಆಗಿರಲಿಲ್ಲ. ಈಗ ಬಿಜೆಪಿಗೆ ಹೋದರೂ ಏನೂ ಎಫೆಕ್ಟ್ ಆಗಲ್ಲ. ಅವರಿಂದ ಎಫೆಕ್ಟ್ ಆಗಿದ್ರೆ ವಿಧಾನಸಭಾ ಚುನಾವಣೆಯಲ್ಲಿ ಯಾಕೆ ಸೋಲುತ್ತಿದ್ದರು ಎಂದರು.

ಶೆಟ್ಟರ್ ಪಕ್ಷ ಬಿಟ್ಟಿದ್ದು ವೈಯುಕ್ತಿಕ. ಅವರು ನಮ್ಮ ಬೀಗರಾದ್ರೆ ಮನೆಯೊಳಗೆ ಇರುತ್ತಾರೆ. ಕಾಂಗ್ರೆಸ್ ಗೆ ತನ್ನದೇ ಆದಂತ ವೋಟ್ ಇವೆ. ಏನೂ ಹಾನಿಯಾಗಲ್ಲ. ಕಾಂಗ್ರೆಸ್ ಕಾರ್ಯಕರ್ತರೇ ಶಕ್ತಿ. ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಪ್ರತಿಷ್ಠಾಪನೆಯಿಂದ ಬಿಜೆಪಿಗೆ ಲಾಭ ಆಗಲ್ಲ. ನಾವೂ ಕೂಡ ರಾಮನಭಕ್ತರು. ಈ ವಿಚಾರ ಹಿಡಿದುಕೊಂಡು ಚುನಾವಣೆಗೆ ಹೋಗಲ್ಲ. ಜನರಿಗೆ ಮೊದಲು ಊಟ, ವಸತಿ, ಶಿಕ್ಷಣ ಬೇಕು ಅಗತ್ಯ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top