ದಾವಣಗೆರೆ: ಒತ್ತುವರಿಯಾಗಿದ್ದ 11.4 ಹೆಕ್ಟೇರ್ (28.5 ಎಕರೆ) ಅರಣ್ಯ ಪ್ರದೇಶವನ್ನು ಜಿಲ್ಲಾಡಳಿತದ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆಯೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಗಿದೆ.
ಜಿಲ್ಲೆಯ ಜಗಳೂರು ತಾಲ್ಲೂಕಿನ ಗೌಡಗೊಂಡನಹಳ್ಳಿ ಅರಣ್ಯ ಪ್ರದೇಶದಲ್ಲಿ ಒತ್ತುವರಿಯಾಗಿದ್ದ 11.4 ಹೆಕ್ಟೇರ್ ಪ್ರದೇಶವನ್ನು ರೈತರಿಂದ ವಶಕ್ಕೆ ಪಡೆಯಲಾಗಿದೆ. ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಅಗ್ನಿ ಶಾಮಕ ಹಾಗೂ ಪರಿಶಿಷ್ಟ ಬುಡಕಟ್ಟು ಇಲಾಖೆಗಳ ಜಂಟಿ ಕಾರ್ಯಾಚರಣೆ ಮೂಲಕ ಜೆಸಿಬಿ ಮತ್ತು ಹಿಟಾಚಿ ಯಂತ್ರಗಳೊಂದಿಗೆ ಸಿಪಿಟಿ ಗುಂಡಿ ತೆಗೆಯುವ ಮೂಲಕ ಒತ್ತುವರಿ ತರವುಗೊಸಲಾಯಿತು.
ಗೌಡಗೊಂಡನಹಳ್ಳಿ ಗ್ರಾಮದ ಸರ್ವೆ ನಂಬರ್ 50 ಮತ್ತು 51ರಲ್ಲಿ 20 ರೈತರುಂದ ಒಟ್ಟು 11.4 ಹೆಕ್ಟೇರ್ ಪ್ರದೇಶ ಒತ್ತುವರಿಯಾಗಿದೆ ಎಂದು ಅರಣ್ಯ ಇಲಾಖೆ ಗುರುತಿಸಿತ್ತು. ಎಎಸ್ಪಿ ಮಂಜುನಾಥ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಗ್ಯಲಕ್ಷ್ಮಿ, ಎಸಿ ಸಂತೋಷ್ ಪಾಟೀಲ್ ನೇತೃತ್ವದಲ್ಲಿ ಒತ್ತುವರಿ ತೆರವು ಮಾಡಲಾಗಿದೆ. ತೆರವು ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ ರೈತರನ್ನು ಬಂಧಿಸಿದ ಪೊಲೀಸರು ತಾಲ್ಲೂಕಿನ ಗಡಿಮಾಕುಂಟೆ ಉಪ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು.
ರೈತರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆದು, ಅರಣ್ಯ ಭೂಮಿಯನ್ನು ರೈತರು ಒತ್ತುವರಿ ಮಾಡಿರುವ ಬಗ್ಗೆ ಆದೇಶಿಸಲಾಗಿತ್ತು. ಈ ಆದೇಶದ ವಿರುದ್ಧ ರೈತರು ಇದುವರೆಗೂ ಮೇಲ್ಮನವಿ ಸಲ್ಲಿಸಿಲ್ಲ. ಹೀಗಾಗಿ ಸರ್ಕಾರದ ಆದೇಶದ ಮೇರೆಗೆ ಒತ್ತುವರಿ ತೆರವು ಮಾಡಲಾಗಿದೆ.



