ದಾವಣಗೆರೆ: ಲಾರಿ ಡಿಕ್ಕಿ ಹೊಡೆಸಿ ಪಾದಚಾರಿ ಸಾವಿಗೆ ಕಾರಣವಾಗಿದ್ದ ಚಾಲಕನನ್ನು 32 ವರ್ಷ ನಂತರ ಜಗಳೂರು ಪೊಲೀಸರು ಬಂಧಿಸಿದ್ದಾರೆ.
ತರಳಬಾಳು ಹುಣ್ಣಿಮೆ ನೇರ ಪ್ರಸಾರ
ಹಾಸನ ಜಿಲ್ಲೆಯ ಅರಸಿಕೆರೆಯ ಗಂಗಾಧರಪ್ಪ (67) ಬಂಧಿತ ಆರೋಪಿ.1994ರಲ್ಲಿ ಜಿಲ್ಲೆಯ ಜಗಳೂರು ತಾಲ್ಲೂಕಿನ ಕಲ್ಲೇದೇವರಪುರ ಗ್ರಾಮದ ಬಳಿ ಹಳೆಯ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಚಾಲಕ ಲಾರಿ ಹರಿಸಿ ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆ ನಂತರ ಆರೋಪಿ ತಲೆಮರೆಸಿಕೊಂಡಿದ್ದನು.
ಜಗಳೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪೊಲೀಸರಿಗೆ 32 ವರ್ಷದಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಆರೋಪಿಯನ್ನು ಸಿಪಿಐ ಸಿದ್ರಾಮಯ್ಯ ಮಾರ್ಗದರ್ಶನದಲ್ಲಿ ಎಎಸ್ಐ ವೆಂಕಟೇಶ್ ಜಿ.ಟಿ. ಅವರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗಳೂರಿನ ನ್ಯಾಯಾಲಯಕ್ಕೆ ಹಾಜರಪಡಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ.



