Connect with us

Dvgsuddi Kannada | online news portal | Kannada news online

ದಾವಣಗೆರೆ; ಯುವಕನ ಹತ್ಯೆ ಕೇಸ್; ಪಿಡಿಒ‌ ಸೇರಿ 11ಜನರ ವಿರುದ್ಧ ಎಫ್ ಐಆರ್

n4600145981673172941730fe16d90299307437f3fc8c15130c1b232e07b6cf794ea0822ca0068183388815

ಜಗಳೂರು

ದಾವಣಗೆರೆ; ಯುವಕನ ಹತ್ಯೆ ಕೇಸ್; ಪಿಡಿಒ‌ ಸೇರಿ 11ಜನರ ವಿರುದ್ಧ ಎಫ್ ಐಆರ್

ದಾವಣಗೆರೆ: ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಆರ್ ಟಿ ಐ ಕಾರ್ಯಕರ್ತ ಹಾಗೂ ಕರವೇ ತಾಲ್ಲೂಕು ಅಧ್ಯಕ್ಷ ಜಿ.ಪಿ.ರಾಮಕೃಷ್ಣ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಿಂತೆ ಪೊಲೀಸರು ಪಿಡಿಒ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರು ಪಿಡಿಓ ಎ.ಟಿ.ನಾಗರಾಜ್ ಸೇರಿ 11 ಜನರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.ಪ್ರಕರಣ ಸಂಬಂಧ ಈಗಾಗಲೇ ಪ್ರಶಾಂತ್, ದರ್ಶನ್ ಎಂಬುವರನ್ನು ಬಂಧಿಸಲಾಗಿದ್ದು, ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಿಲ್ಲೆಯ ಜಗಳೂರು ತಾಲೂಕಿನ ಹೊಸಕೆರೆ ಡಾಬಾ ಬಳಿ ಹತ್ಯೆ ನಡೆದಿದೆ. ಶನಿವಾರ ರಾತ್ರಿ ಹೊಸಕೆರೆ ಡಾಬಾದಲ್ಲಿ ರಾಮಕೃಷ್ಣ ಮತ್ತು ಇತರರು ಪಾರ್ಟಿ ಮಾಡುತ್ತಿದ್ದ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ರಾಮಕೃಷ್ಣ, ಗ್ರಾಮ ಪಂಚಾಯತಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಪಿಡಿಒ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟ ಮಾಡುತ್ತಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

ದಾವಣಗೆರೆ

Advertisement
Advertisement Enter ad code here

Title

To Top