Connect with us

Dvgsuddi Kannada | online news portal | Kannada news online

ಏ. 29 ರಂದು ಜಗಳೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ; ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

jagaluru dc visit

ಜಗಳೂರು

ಏ. 29 ರಂದು ಜಗಳೂರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ; ಸ್ಥಳ ಪರಿಶೀಲಿಸಿದ ಜಿಲ್ಲಾಧಿಕಾರಿ

ಜಗಳೂರು: ಏ. 29ರಂದು ಜಗಳೂರು ಪಟ್ಟಣಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮನ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ  ಭೇಟಿ ನೀಡಿ ಸ್ಥಳ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, 29ರಂದು ಬೆಳಿಗ್ಗೆ ಜಗಳೂರು ಪಟ್ಟಣಕ್ಕೆ ಸಿಎಂ ಆಗಮಿಸಲಿದ್ದಾರೆ. ವೇದಿಕೆ ಕಾರ್ಯಕ್ರಮ  ನಗರದ ಗುರು ಭವನದ ಹತ್ತಿರ ಆಯೋಜಿಸಲಾಗಿದ್ದು,  ಸ್ಥಳ ಪರಿಶೀಲನೆ ನಡೆದಿದ್ದೇವೆ. ಪಟ್ಟಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಬಗ್ಗೆ  ಪೊಲೀಸ್ ವರಿಷ್ಠಾಧಿಕಾರಿ ಎಸ್ ಪಿ ರಿಷ್ಯಂತ್ ಜೊತೆ ಚರ್ಚಿಸಿ ಕ್ರಮ ತೀರ್ಮಾನ ಕೈಗೊಳ್ಳಲಾಗುವುದು. ಕಾರ್ಯಕ್ರಮ ಯಶಸ್ವಿಯಾಗಿ  ಜಿಲ್ಲಾ ಆಡಳಿತ,  ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮತ್ತು ತಾಲೂಕಾಡಳಿತ ಈಗಾಗಲೇ ಸಕಲ ಸಿದ್ದತೆ ಮಾಡಿಕೊಂಡಿದ್ದೇವೆ ಎಂದರು.

ಶಾಸಕ ಎಸ್ ವಿ ರಾಮಚಂದ್ರ ಮಾತನಾಡಿ,  ಸಿಎಂ ಭದ್ರ ಮೇಲ್ದಂಡೆ ಯೋಜನೆಯ 57 ಕೆರೆ ತುಂಬಿಸುವ ಏತ ನೀರಾವರಿ ಯೋಜನೆ ಶಂಕುಸ್ಥಾಪನೆ ನಡೆಯಲಿದೆ. ಪ್ರವಾಸಿ ಮಂದಿರದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ನೂತನವಾಗಿ ನಿರ್ಮಾಣವಾಗಿರುವ ವಿ.ಐ.ಪಿ ಗೆಸ್ಟ್ ಹೌಸ್, ಕೆಎಸ್ಆರ್ ಟಿಸಿ ಬಸ್ ಡಿಪೋ, 3 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಆಟದ ಮೈದಾನ,  ಕನ್ನಡ ಭವನ ಸೇರಿದಂತೆ 2,500 ಕೋಟಿಗೂ  ವಿವಿಧ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ ಎಂದರು.  ಈ ಸಂದರ್ಭದಲ್ಲಿ  ಜಿ.ಪಂ ಸಿಇಒ ಡಾ. ಚೆನ್ನಪ್ಪ, ತಾಲೂಕು ದಂಡಾಧಿಕಾರಿ ಸಂತೋಷ್ ಕುಮಾರ್. ತಾ.ಪಂ ಇ ಓ ಲಕ್ಷ್ಮಿಪತಿಸಿ, ಪಿ.ಐ ಮಂಜುನಾಥ್ ಪಂಡಿತ್, ಪಿ.ಎಸ್.ಐ ಮಹೇಶ್ ಲಕ್ಷ್ಮಣ್  ಸೇರಿದಂತೆ ಮತ್ತಿತರರು ಇದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top