ದಾವಣಗೆರೆ: ವಸತಿ ಶಾಲೆಗೆ ಹೋಗಲು ಇಷ್ಟ ಇಲ್ಲದಿದ್ರೂ ಒತ್ತಾಯದಿಂದ ಸೇರಿಸಿದಕ್ಕೆ ಬಾಲಕ ಶಾಲೆಯಲ್ಲಿಯೇ ಆತ್ಮಹತ್ಯೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಸತಿ ಶಾಲೆಗೆ ಹೋಗಲು ಇಷ್ಟ ಇಲ್ಲದಿದ್ರೂ, ಪೋಷಕರು ಒತ್ತಾಯದಿಂದ ಸೇರಿಸಿದಕ್ಕೆ ಬಾಲಕ ಶಾಲೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಜಗಳೂರು ತಾಲ್ಲೂಕಿನಲ್ಲಿ ನಡೆದಿದೆ.

ಜಗಳೂರು ತಾಲೂಕಿನ ಮೆದಗಿನಕೆರೆ ವಸತಿ ಶಾಲೆಯ 6ನೇ ತರಗತಿ ಎಸ್.ಸುನೀಲ್(12) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಿನ್ನೆ(ಆ.23) ರಾತ್ರಿ ಶಾಲೆಯ ಶೌಚಾಲಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಾಲ್ಲೂಕಿನ ಸಾಗಲಗಟ್ಟೆ ಗ್ರಾಮದ ಸುರೇಶ್ ಹಾಗೂ ಕವಿತಾ ಅವರ ಪುತ್ರ ಸುನೀಲ್. ಅನಾರೋಗ್ಯದ ಕಾರಣದಿಂದ ಒಂದು ವಾರದ ಹಿಂದೆ ಪೋಷಕರು ಸುನೀಲ್ ನನ್ನು ಸಾಗಲಕಟ್ಟೆ ಗ್ರಾಮಕ್ಕೆ ಕರೆದೊಯ್ದಿದ್ದರು. ಚೇತರಿಸಿಕೊಂಡ ಬಳಿಕ ಪೋಷಕರು ವಿದ್ಯಾರ್ಥಿಯನ್ನು ಸೋಮವಾರ ವಸತಿ ಶಾಲೆಗೆ ಬಿಟ್ಟು ಹೋಗಿದ್ದರು.

ಮಂಗಳವಾರ ಸಂಜೆ ಪೋಷಕರಿಗೆ ಕರೆ ಮಾಡಿ ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗಿ ಎಂದು ಮನವಿ ಮಾಡಿದ್ದ. ನಾಳೆ ಬರುತ್ತೇನೆ ಎಂದು ಪೋಷಕರು ಹೇಳಿದ್ದಾರೆ. ಆದರೆ ಪೋಷಕರು ಬಾರದೇ ಇದ್ದುದ್ದರಿಂದ ಮನನೊಂದು ಶೌಚಾಲಯಕ್ಕೆ ತೆರಳಿ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಪ್ರಾಂಶುಪಾಲರಾದ ಜಿ.ಎನ್. ರೂಪಕಲಾ ಅವರು ಶೌಚಾಲಯದಲ್ಲಿ ನೇಣು ಹಾಕಿಕೊಂಡು ನರಳುತ್ತಿದ್ದ ವಿದ್ಯಾರ್ಥಿಯನ್ನು ತಮ್ಮ ಕಾರಿನಲ್ಲಿ ಜಗಳೂರಿನ ಸರ್ಕಾರಿ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ಈ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಸ್ಪತ್ರೆಯಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಎಸ್.ಪಿ. ರಿಷ್ಯಂತ್ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಡಿ.ರೇಷ್ಮಾಕೌಸರ್, ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ಸಿಪಿಐ ಸತ್ಯನಾರಾಯಣ, ತಹಶೀಲ್ದಾರ್ ಜಿ.ಸಂತೋಷ್ ಕುಮಾರ್, ಜಗಳೂರು ಪಿಎಸ್‌ಐ ಮಹೇಶ ಹೊಸಪೇಟೆ, ಪ್ರಾಂಶುಪಾಲರಾದ ರೂಪಕಲಾ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *