ಜಗಳೂರು: ಭಾರೀ ಮಳೆಗೆ 60 ಎಕರೆಗೂ ಅಧಿಕ  ತೋಟಗಾರಿಕೆ ಬೆಳೆ ನಾಶ; ಶಾಸಕ ಎಸ್. ವಿ. ರಾಮಚಂದ್ರ ಭೇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಜಗಳೂರು: ಭಾರೀ ಮಳೆಗೆ ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿ 60 ಎಕರೆಗೂ ಅಧಿಕ ಅಡಿಕೆ ಬೆಳೆ ಸೇರಿ ವಿವಿಧ ಥೋಟಗಾರಿಕೆ ಬೆಳೆ ನಾಶವಾಗಿದ್ದು,  ಶಾಸಕ ಎಸ್. ವಿ. ರಾಮಚಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕಿನ ಬಿಳಿಚೋಡು ಹೋಬಳಿ ವ್ಯಾಪ್ತಿಯಲ್ಲಿ  ಭಾರೀ ಮಳೆಗಾಳಿಯಿಂದಾಗಿ 60 ಎಕರೆಗೂ ಅಧಿಕ ತೋಟಗಾರಿಕೆ ಬೆಳೆಗಳು ನಾಶವಾಗಿದೆ. 14 ಮನೆಗಳಿಗೆ ಹಾನಿಯಾಗಿದೆ. ಬಿಳಿಚೋಡು ಹೋಬಳಿ ವ್ಯಾಪ್ತಿಯ ಬಿಳಿಚೋಡು, ಚಿಕ್ಕಅರಕೆರೆ, ಹಾಲೇಕಲ್ಲು, ಕೊಡದಗುಡ್ಡ, ಹೊಸಕೆರೆ, ಮಾಚಿಕೆರೆ, ಗುಡ್ಡದನಿಂಗನಹಳ್ಳಿ ಸೇರಿದಂತೆ  21 ಹಳ್ಳಿಗಳಲ್ಲಿ ತೋಟಗಳಿಗೆ ಹಾನಿಯಾಗಿದೆ.

ತೋಟಗಾರಿಕೆ ಬೆಳೆಗಳಾದ ಅಡಿಕೆ, ನುಗ್ಗೆ, ಬಾಳೆ, ಎಲೆಬಳ್ಳಿ ತೋಟ, ಹಲಸು, ಮಾವು, ಹಾಗೂ ತೆಂಗಿನ ಮರಗಳು ಸೇರಿ 67 ಎಕರೆ ಪ್ರದೇಶದಲ್ಲಿ ರೂ 50 ಲಕ್ಷಕ್ಕೂ ಹೆಚ್ಚು ಹಾನಿಯಾಗಿದೆ. ಚಿಕ್ಕಬನ್ನಿಹಟ್ಟಿ,ಕೊರಟಿಕೆರೆ, ಚಿಕ್ಕಅರಕೆರೆ,ಮೆದಿಕೆರೇನಹಳ್ಳಿ ಪಾಲನಾಯಕನ ಕೋಟೆ. ಐನಹಳ್ಳಿ ಸೇರಿ 14 ಹಳ್ಳಿ ಗಳಲ್ಲಿ 20 ಮನೆಗಳು ಕುಸಿದಿದ್ದು, 7 ಲಕ್ಷಕ್ಕೂ ಹೆಚ್ಚುನಷ್ಟವಾಗಿದೆ. ಮಳೆಗಾಳಿಯಿಂದ ಬೆಳೆಹಾನಿಯಾಗಿರುವ ಗುಡ್ಡದನಿಂಗನಹಳ್ಳಿ, ಐನಹಳ್ಳಿ ಮುಂತಾದ ಗ್ರಾಮದ ತೋಟಗಳಿಗೆ ಜಗಳೂರಿನ ಶಾಸಕ ಎಸ್.ವಿ.ರಾಮಚಂದ್ರ ಹಾಗೂ ತಹಶಿಲ್ದಾರ್ ಸಂತೋಷ್ ಕುಮಾರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ವೆಂಕಟೇಶ ಮೂರ್ತಿ ಭೇಟಿ ನೀಡಿ ಪರಿಶೀಲಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *