Connect with us

Dvgsuddi Kannada | online news portal | Kannada news online

ಜನಸ್ಪಂದನ; ದಾವಣಗೆರೆ ಜಿಲ್ಲೆಯಿಂದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೆ; ಜಿಲ್ಲಾಧಿಕಾರಿ

IMG 20240208 191958

ದಾವಣಗೆರೆ

ಜನಸ್ಪಂದನ; ದಾವಣಗೆರೆ ಜಿಲ್ಲೆಯಿಂದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೆ; ಜಿಲ್ಲಾಧಿಕಾರಿ

ದಾವಣಗೆರೆ: ಮುಖ್ಯಮಂತ್ರಿಗಳು ಫೆಬ್ರವರಿ 8 ರಂದು ವಿಧಾನಸೌಧದ ಮುಂಭಾಗದಲ್ಲಿ ಎರಡನೇ ರಾಜ್ಯಮಟ್ಟದ ಬೃಹತ್ ಜನಸ್ಪಂದನ ಹಮ್ಮಿಕೊಂಡಿದ್ದು, ಕಳೆದ ಜನಸ್ಪಂದನದಲ್ಲಿ ಸಲ್ಲಿಕೆಯಾಗಿದ್ದ ಜಿಲ್ಲೆಯ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.

ಫೆ.7 ರ ವರೆಗೆ ವಿವಿಧ ಇಲಾಖೆಗಳಿಂದ 43 ಅರ್ಜಿಗಳು ಬಾಕಿ ಇದ್ದವು, ಈ ಅರ್ಜಿಗಳನ್ನು ಕಾಲಮಿತಿಯಲ್ಲಿ ಹಾಗೂ ಆದ್ಯತೆಯಲ್ಲಿ ಇತ್ಯರ್ಥ ಮಾಡಲು ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು ಒಂದೇ ದಿನದಲ್ಲಿ ಎಲ್ಲಾ ಅರ್ಜಿಗಳನ್ನು ವಿಲೆ ಮಾಡಿ ಶೂನ್ಯಕ್ಕೆ ತರಲಾಗಿದೆ. ಫೆ.8 ರಂದು ನಡೆದ ಜನಸ್ಪಂದನದಲ್ಲಿ ಸಲ್ಲಿಕೆಯಾಗುವ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ವಿಲೆ ಮಾಡಲಾಗುತ್ತದೆ ಎಂದರು.

ಸಲ್ಲಿಕೆಯಾದ ಅರ್ಜಿಗಳಲ್ಲಿ ಕುಡಿಯುವ ನೀರು, ನಾಗರೀಕ ಸೌಲಭ್ಯ, ಖಾತೆ ಬದಲಾವಣೆ, ಭೂ ಮಂಜೂರಾತಿ, ಪುನರ್ವಸತಿ, ಸಾಗುವಳಿ ಚೀಟಿ, ನಿಯಮಬಾಹಿರ ವಂಶವೃಕ್ಷ ನೀಡಿಕೆ ಸೇರಿದಂತೆ ಹಲವು ಕುಂದುಕೊರತೆಗಳ ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ತಿಳಿಸಿದ್ದಾರೆ.

ಬೆಳಗ್ಗೆಯಿಂದ ಸಂಜೆಯವರೆಗೆ ನಡೆದ ಜನಸ್ಪಂದನ ಕಾರ್ಯಕ್ರಮದ ವೀಕ್ಷಣೆ ಯನ್ನು ಆನ್‍ಲೈನ್ ಮೂಲಕ ಮಾಡಲಾಯಿತು. ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ. ಇಟ್ನಾಳ್, ಹೆಚ್ಚುವರಿ ರಕ್ಷಣಾಧಿಕಾರಿ ವಿಜಯಕುಮಾರ್ ಎಂ.ಸಂತೋಷ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top