ದಾವಣಗೆರೆ: ಜಿಲ್ಲೆಯ ಎಲ್ಲ ತಾಲ್ಲೂಕ್ ಗಳಲ್ಲಿ ಬಿಐಇಆರ್ ಟಿ ಹುದ್ದೆಗಳಿಗೆ ವಿಶೇಷ ಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಸಾರ್ವಜನಿಕ ಸಮಗ್ರ ಶಿಕ್ಷಣ ಇಲಾಖೆಯ ಸಮಗ್ರ ಕರ್ನಾಟಕ ಕಾರ್ಯಕ್ರಮದಡಿಯಲ್ಲಿ ಸಮನ್ವಯ ಶಿಕ್ಷಣ ಚಟುವಟಿಕೆಯ ದಾವಣಗೆರೆ ಜಿಲ್ಲಾ ವ್ಯಾಪ್ತಿಯ 06 ತಾಲ್ಲೂಕುಗಳಲ್ಲಿ ಖಾಲಿ ಇರುವ ಬಿ.ಐ.ಇ.ಆರ್.ಟಿ(ಪ್ರಾಥಮಿಕ) ಮತ್ತು ಬಿ.ಐ.ಇ.ಆರ್.ಟಿ(ಫ್ರೌಡ) ಹುದ್ದೆಗಳಿಗೆ ವಿಶೇಷ ಚೇತನ ಮಕ್ಕಳ ಶಿಕ್ಷಣಕ್ಕೆ ಸಂಬಂಧಿಸಿದ ಆರ್.ಸಿ.ಐ ನಿಯಮದಂತೆ ವಿಶೇಷ ಡಿ.ಇಡಿ ಮತ್ತು ವಿಶೇಷ ಬಿ.ಇಡಿ ಪದವಿಯ ವಿದ್ಯಾರ್ಹತೆ ಹೊಂದಿರುವವರನ್ನು 2022-23ನೇ ಸಾಲಿಗೆ ನೇರಗುತ್ತಿಗೆ ಮೂಲಕ ತಾತ್ಕಾಲಿಕ ಆಯ್ಕೆ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಎಲ್ಲಾ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳು ಮತ್ತು ಆರ್.ಸಿ.ಐ ನೊಂದಣಿ(2022-23ನೇ ಸಾಲಿಗೆ) ಪ್ರಮಾಣ ಪತ್ರದೊಂದಿಗೆ ಸ್ವವಿವರವುಳ್ಳ ಮಾಹಿತಿಯನ್ನು ಜೂ.06 ಸಂಜೆ 5 ಗಂಟೆಯೊಳಗೆ ಅಂಚೆ ಅಥವಾ ಮುದ್ದಾಂ ಉಪನಿರ್ದೇಶಕರು ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಸಮಗ್ರ ಶಿಕ್ಷಣ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ, ಅಂಬೇಡ್ಕರ್ ವೃತ್ತ ದಾವಣಗೆರೆ-577002 ಇಲ್ಲಿಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-296445, ಮೊ.ಸಂ:9448999394ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *