ದಾವಣಗೆರೆ; ಚಿತ್ರದುರ್ಗದಲ್ಲಿರುವ ಶ್ರೀ ಕಾಲಭೈರವ ವಸತಿ ಫ್ರೌಢಶಾಲೆಯಲ್ಲಿ ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾಜಿ ಸೈನಿಕರ ಮೀಸಲಾತಿಯಡಿಯಲ್ಲಿ (ಬಿಂದು-40) ಖಾಲಿ ಇರುವ ಸಹ ಶಿಕ್ಷಕ ಹುದ್ದೆಗೆ ಬಿ.ಎ. ಬಿ.ಇಡಿ ವಿದ್ಯಾರ್ಹತೆ ಪಡೆದಿರುವ ಮಾಜಿ ಸೈನಿಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಿದ್ದು, ಮಾಜಿ ಸೈನಿಕರ ಮೂಲ ದಾಖಲೆಯೊಂದಿಗೆ ಅರ್ಜಿಯನ್ನು ಜುಲೈ.13ರಂದು ಮಹ್ಯಾಹ್ನ 1ಗಂಟೆಯೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಖುದ್ದಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಕಚೇರಿಯ ದೂ.08182-220925ಗೆ ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



