Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 20 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ವೇತನ‌ 28‌ಸಾವಿರ

images 41

ದಾವಣಗೆರೆ

ದಾವಣಗೆರೆ: ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 20 ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ವೇತನ‌ 28‌ಸಾವಿರ

ದಾವಣಗೆರೆ: ದಾವಣಗೆರೆ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ 20 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಷ್ಠಾನದಲ್ಲಿ ಖಾಲಿ ಹುದ್ದೆಯನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

  • ಹುದ್ದೆ ವಿವರ: ತಾಂತ್ರಿಕ ಸಹಾಯಕ (ಸಿವಿಲ್​)- 4
  • ತಾಂತ್ರಿಕ ಸಹಾಯಕ (ಕೃಷಿ)- 1
  • ತಾಂತ್ರಿಕ ಸಹಾಯಕ (ತೋಟಗಾರಿಕೆ)- 6
  • ತಾಂತ್ರಿಕ ಸಹಾಯಕ (ಅರಣ್ಯ)- 2
  • ತಾಂತ್ರಿಕ ಸಹಾಯಕ (ರೇಷ್ಮೆ)-1
  • ಆಡಳಿತ ಸಹಾಯಕರು -6

 

  • ವಿದ್ಯಾರ್ಹತೆ:ತಾಂತ್ರಿಕ ಸಹಾಯಕರು;ಸಿವಿಲ್​ನಲ್ಲಿ ಬಿಇ ಪದವಿ
  • ತಾಂತ್ರಿಕ ಸಹಾಯಕರು (ಕೃಷಿ): ಅಭ್ಯರ್ಥಿಗಳು ಕೃಷಿ ವಿಷಯದಲ್ಲಿ ಬಿಎಸ್ಸಿ ಪದವಿ
  • ತಾಂತ್ರಿಕ ಸಹಾಯಕರು (ತೋಟಗಾರಿಕೆ): ತೋಟಗಾರರಿಕೆಯಲ್ಲಿ ಬಿಎಸ್ಸಿ ಪದವಿ
  • ತಾಂತ್ರಿಕ ಸಹಾಯಕರು (ಅರಣ್ಯ): ಅರಣ್ಯಶಾಸ್ತ್ರದಲ್ಲಿ ಬಿಎಸ್ಸಿ ಪದವಿ
  • ತಾಂತ್ರಿಕ ಸಹಾಯಕ (ರೇಷ್ಮೆ): ರೇಷ್ಮೆಯಲ್ಲಿ ಬಿಎಸ್ಸಿ ಪದವಿ
  • ಆಡಳಿತ ಸಹಾಯಕರು: ಬಿಕಾಂ ಪದವಿ ಜೊತೆಗೆ ಕಂಪ್ಯೂಟರ್​ ಜ್ಞಾನ

ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21ರಿಂದ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು. ವೇತನ: ಆಡಳಿತ ಸಹಾಯಕರ ಹುದ್ದೆಗೆ 22 ಸಾವಿರ ನಿಗದಿ ಪಡಿಸಲಾಗಿದೆ. ಉಳಿದ ಹುದ್ದೆಗಳಿಗೆ 28 ಸಾವಿರ ವೇತನ ಜೊತೆಗೆ ಪ್ರತ್ಯೇಕ ಭತ್ಯೆ 2000 ರೂ. ಇರಲಿದೆ. ಆಯ್ಕೆ ವಿಧಾನ: ಈ ಹುದ್ದೆಗಳನ್ನು ಮೆರಿಟ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಡಳಿತ ಸಹಾಯಕ ಹುದ್ದೆಗೆ ಶಾರ್ಟ್​ ಲಿಸ್ಟ್​ ಮಾಡಿರುವ ಅಭ್ಯರ್ಥಿಗಳ ಕನ್ನಡ ಮತ್ತು ಇಂಗ್ಲಿಷ್​ ಟೈಪಿಂಗ್​ ಮತ್ತು ಕಂಪ್ಯೂಟರ್​ ಜ್ಞಾನ ಸಂಬಂಧ ಪ್ರಾಯೋಗಿಕ ಪರೀಕ್ಷೆ ನಡೆಸಲಾಗುವುದು.

ಮೇಲಿನ ಹುದ್ದೆಗಳಲ್ಲಿ ಅಭ್ಯರ್ಥಿಗಳು 1 ರಿಂದ 2 ವರ್ಷ ಹುದ್ದೆ ಕಾರ್ಯ ನಿರ್ವಹಿಸಿದ ಅನುಭವವನ್ನು ಹೊಂದಿರಬೇಕು. ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ದಿನಾಂಕ ಆಗಸ್ಟ್​​ 10 ರಿಂದ ಆಗಸ್ಟ್​​ 24 ಕೊನೆ ದಿನ. ಅಭ್ಯರ್ಥಿಗಳು ದಾವಣಗೆರೆ ಜಿಲ್ಲೆ ಅಧಿಕೃತ ವೆಬ್​ಸೈಟ್​​ ಮೂಲಕ ಅರ್ಜಿ ಸಲ್ಲಿಸಬೇಕು. ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಕೆಗೆ davanagere.nic.in ವೆಬ್ ಸೈಟ್ ಗೆ  ಭೇಟಿ ನೀಡಬಹುದು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top