ದಾವಣಗೆರೆ: ವಿಕಲಚೇತನರಿಗೆ ಡಾಟ ಎಂಟ್ರಿ ಆಪರೇಟರ್, ಮೊಬೈಲ್ ರಿಪೇರಿ, ಟೈಲರಿಂಗ್ ಸೇರಿ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವತಿಯಿಂದ ವಿಕಲಚೇತನ ಯುವಕ, ಯುವತಿಯರು, ಸ್ವಯಂ ಉದ್ಯೋಗ ಕೈಗೊಳ್ಳುವ ಅಥವಾ ಬೇರೆ ಕಡೆ ಹೋಗಿ ಉದ್ಯೋಗ ಮಾಡಲು ನೆರವಾಗುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು.

18 ರಿಂದ 40 ವರ್ಷದ ವಯೋಮಾನದ ವಿಕಲಚೇತನರು ಕಂಪ್ಯೂಟರ್ (ಡಾಟ ಎಂಟ್ರಿ ಆಪರೇಟರ್) ತರಬೇತಿ, ಮೊಬೈಲ್ ರಿಪೇರಿ, ತೋಟಗಾರಿಕೆ, ನರ್ಸರಿ (ಗಿಡ ಬೆಳೆಸುವುದು), ಬಿಸಿನೆಸ್ ಪ್ರೋಸೆಸ್ ಔಟ್‍ಸೊರ್ಸಿಂಗ್, ಬ್ಯೂಟೀಷಿಯನ್, ಟೈಲರಿಂಗ್, ಹೈನುಗಾರಿಕೆ, ಹೋಂ ನಸಿರ್ಂಗ್ (ಗೃಹ ಶುಶ್ರೂಷಕರು), ಹೋಂ ಅಪ್ಲೈಯನ್ಸಸ್ ರಿಪೇರ್ ಅರ್ಜಿ ಸಲ್ಲಿಸಬಹುದು.

ಗರಿಷ್ಠ 2 ವಿಷಯಗಳನ್ನು ಮಾತ್ರ ಆಯ್ಕೆ ಮಾಡುವುದು ಹಾಗೂ ತರಬೇತಿ ಅವಧಿಯಲ್ಲಿ ಊಟ, ವಸತಿ, ಉಚಿತವಾಗಿ ನೀಡಲಾಗುವುದು. ಆದ್ದರಿಂದ ಆಸಕ್ತಿ ಇರುವ ನಿರುದ್ಯೋಗಿ ವಿಕಲಚೇತನರ ಮಾಹಿತಿಯನ್ನು ವಿಆರ್‍ ಡಬ್ಲ್ಯೂ,ಯುಆರ್‍ ಡಬ್ಲ್ಯೂ,ಎಂಆರ್‍ ಡಬ್ಲ್ಯೂ, ಗಳಿಗೆ ಮೇ.25 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹೊನ್ನಾಳಿ ಶೈಲಜಾ ಕೆ.ಎಂ. ಮೊ.ಸಂ: 9886366809, ಚನ್ನಗಿರಿಯ ಸುಬ್ರಮಣ್ಯಂ ಮೊ.ಸಂ: 9945738141, ಜಗಳೂರು ಎಂ ಕೆ ಶಿವನಗೌಡ ಮೊ.ಸಂ: 9902105734, ಹರಿಹರ ಶಶಿಕಲಾ ಟಿ. ಮೊ.ಸಂ: 9945458058, ದಾವಣಗೆರೆ ಚನ್ನಪ್ಪ. ಬಿ ಮೊ.ಸಂ: 9590829024 ಸಂಪರ್ಕಿಸಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಾಧಿಕಾರಿ ಡಾ|| ಕೆ.ಕೆ. ಪ್ರಕಾಶ್ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *