Connect with us

Dvgsuddi Kannada | online news portal | Kannada news online

ದಾವಣಗೆರೆ: ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ತರಬೇತಿ

business training

ಪ್ರಮುಖ ಸುದ್ದಿ

ದಾವಣಗೆರೆ: ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗ ತರಬೇತಿ

ಹರಿಹರ: 16 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ತರಬೇತಿ ಹಮ್ಮಿಕೊಳ್ಳಲಾಗಿದೆ.

ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವು ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಮೂಲಕ ತರಬೇತಿ ಉಚಿತ ಶಿಬಿರ ಹಮ್ಮಿಕೊಳ್ಳಲಾಗಿದೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿ.ಇ., ಅಥವಾ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳಿ ಈ ತರಬೇತಿ ಪಡೆಯಬಹುದಾಗಿದೆ. ಸಿಎನ್‌ಸಿ ಪ್ರೋಗ್ರಾಮರ್, ಕನ್ವೆನ್ಷನಲ್ ಟರ್ನರ್ ಮಿಲ್ಲಿಂಗ್ ಮಷಿನ್, ಕನ್ವೆನ್ಷನಲ್ ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್ವೆನ್ಷನಲ್ ಸರ್ಫೇಸ್ ಗ್ರೈಂಡರ್ ಆಪರೇಟರ್ ಸೇರಿದಂತೆ ಇನ್ನಿತರ ಕೋರ್ಸ್‌ಗಳಿಗೆ ಅಲ್ಪಾವಧಿ ತರಬೇತಿ ನೀಡಲಾಗುವುದು.

ತರಬೇತಿಯ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು. ತರಬೇತಿ ಮುಗಿದ ನಂತರ ಉದ್ಯೋಗವಕಾಶಕ್ಕೆ ಮಾರ್ಗದರ್ಶನ ನೀಡಲಾಗುವುದು. ಮೇ 2ರೊಳಗೆ ಅರ್ಜಿ ಸಲ್ಲಿಸಬೇಕು, ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಇಂಡಸ್ಟ್ರಿಯಲ್ ಏರಿಯಾ, ಹರ್ಲಾಪುರ, ಕೆಎಸ್‌ಆರ್‌ಟಿಸಿ ಡಿಪೋ ಹತ್ತಿರ, ಹರಿಹರ, ಪೋನ್ ನಂ: 9743185553, 9611025932, 9164369670 ಸಂಪರ್ಕಿಸಲು ಕೋರಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top