ದಾವಣಗೆರೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆಮರಾಠ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು  ಕರೆ ನೀಡಿದ್ದ ಬಂದ್ ಗೆ ಮಧ್ಯ ಕರ್ನಾಟಕದ ದಾವಣಗೆರೆ  ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರದ ಜಯದೇವ ಸರ್ಕಲ್‌ಗೆ ಮಾತ್ರ ಬಂದ್ ಸೀಮಿತವಾಯಿತು. ನಗರದಲ್ಲಿ ವಾಹನ ಸಂಚಾರ, ವಾಣಿಜ್ಯ ಚಟುವಟಿಕೆ  ಎಂದಿನಂತ  ನಡೆದಿದೆ.  ಇನ್ನು  ಬಸ್, ಆಟೋ ಸಂಚಾರ ಕೂಡ ಎಂದಿನಂತೆ ಓಡಾಟ ನಡೆಸುತ್ತಿವೆ.

ಜಯದೇವ ಸರ್ಕಲ್ ನಲ್ಲಿ ಜಮಾಯಿಸಿದ ಕೆಲವು ಕನ್ನಡ ಸಂಘಟನೆ ಮುಖಂಡರು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿದರು. ಕರವೇ ಕಾರ್ಯಕರ್ತರು ಉರುಳು ಸೇವೆ ಮಾಡಿದರು. ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ ಮಾನವ ಸರಪಳಿ ನಿರ್ಮಿಸಿ ಸ್ವಲ್ಪ ಹೊತ್ತು ರಸ್ತೆ ತಡೆ ಮಾಡಿದರು. ಮಹಿಳಾ ಕಾರ್ಯಕರ್ತೆಯರು ಯತ್ನಾಳ್ ಭಾವಚಿತ್ರಕ್ಕೆ ಸಗಣಿ ಎರಚಿ ಚಪ್ಪಲಿ ಸೇವೆ ಮಾಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *