ದಾವಣಗೆರೆ: ಮಧ್ಯ ಕರ್ನಾಟಕದ ದಾವಣಗೆರೆ ಜಿಲ್ಲೆಗೆ ಈ ಬಾರಿಯ ಬಜೆಟ್ (2026) ನಲ್ಲಿಯೂ ನಿರೀಕ್ಷಿತ ಅನುದಾನ ಮೀಸಲಿಟ್ಟಿಲ್ಲ. ಪ್ರತಿ ಬಾರಿಯಂತೆ ಈ ಸಲವೂ ಮೂಗಿಗೆ ತುಪ್ಪ ಸವರಿದಂತೆ ಅಲ್ಪ-ಸ್ವಲ್ಪ ಅನುದಾನ ನೀಡಿ ಸರ್ಕಾರ ಕೈತೊಳೆದುಕೊಂಡಿದೆ. ದಾವಣಗೆರೆ ರಾಜಕೀಯ ಸಮಾವೇಶಕ್ಕೆ ನೆಚ್ಚಿನ ತಾಣ. ಆದರೆ, ಅದೇ ಮಾದರಿಯಲ್ಲಿ ಅನುದಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ
ಹಣಕಾಸು ಸಚಿವರೂ ಆಗಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು (ಮಾ.6) ಕರ್ನಾಟಕ ಬಜೆಟ್ 2026 ಮಂಡಿಸಿದರು.
ದಾವಣಗೆರೆಗೆ ಐಟಿ-ಬಿಟಿ ಕಂಪನಿಗಳು, ಹೊಸ ಕಾರ್ಖಾನೆಗಳು, ಉದ್ಯೋಗಾವಕಾಶ, ನೀರಾವರಿ, ಮೆಡಿಕಲ್ ಕಾಲೇಜು, ವಿಮಾನ ನಿಲ್ದಾಣ, ರೈಲ್ವೆಯೋಜನೆಗಳು, ಹೈಟೆಕ್ ಜಿಲ್ಲಾ ಆಸ್ಪತ್ರೆ ಕೃಷಿ ಕ್ಷೇತ್ರ ಸುಧಾರಣೆ ಸೇರಿ ಹಲವು ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿತ್ತು. ಆದರೆ, ನಿರೀಕ್ಷಿತ ಅನುದಾನ ತರುವಲ್ಲಿ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.
ದಾವಣಗೆರೆ ಜಿಲ್ಲೆಗೆ ಸಿಕ್ಕಿದ್ದೇನು..?
- ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಹಾಗೂ ಅಲ್ಪಸಂಖ್ಯಾತರು ಹೆಚ್ಚಿಗೆ ವಾಸಿಸುತ್ತಿರುವ ವಿವಿಧ ಭಾಗಗಳ ಮೂಲಸೌಕರ್ಯ
ಅಭಿವೃದ್ಧಿಗಾಗಿ ರೂ.100.00 ಕೋಟಿ ಅನುದಾನ - ದಾವಣಗೆರೆ ತಾಲ್ಲೂಕು ಮಾಯಕೊಂಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು
ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಣ - ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ಕಗ್ಗತ್ತೂರು ಹಳ್ಳಕ್ಕೆ ಚೆಕ್ಡ್ಯಾಂ ನಿರ್ಮಾಣ
- ದಾವಣಗೆರೆ ತಾಲ್ಲೂಕು ಆನಗೋಡ್ನಲ್ಲಿ ಹೊಸ ಪೊಲೀಸ್ ಠಾಣೆ ಸ್ಥಾಪನೆ
- ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಶ್ರಮಿಕ ವಸತಿ ಶಾಲೆ ನಿರ್ಮಾಣ
- 2ನೇ ಹಂತದಲ್ಲಿ ಚನ್ನಗಿರಿ ವ್ಯಾಪ್ತಿಯಲ್ಲಿ ಶ್ರಮಿಕ ವಸತಿ ಶಾಲೆಗಳ ನಿರ್ಮಾಣ
- ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕು ಒಟ್ಟು 12,000 ಮೆಟ್ರಿಕ್ ಟನ್ ಸಾಮರ್ಥ್ಯದ ಶೀತಲಗೃಹ 32 ಕೋಟಿ ರೂ.ವೆಚ್ಚದಲ್ಲಿ
ನಿರ್ಮಿಸಲಾಗುವುದು



