ರಾಜ್ಯದಲ್ಲಿಂದು 29 ಸಾವಿರ ಗಡಿದಾಟಿದ ಸೋಂಕು; 208 ಮಂದಿ ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ರಾಜ್ಯದಲ್ಲಿಂದು 29,438 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ 208 ಜನರ ಮೃತಪಟ್ಟಿರುವುದು ವರದಿಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ‌ ಕೊರೊನಾ ಸೋಂಕಿತರ ಸಂಖ್ಯೆ 13,04,397ಕ್ಕೇರಿಕೆಯಾಗಿದೆ. ಬೆಂಗಳೂರಲ್ಲಿ ಇಂದು 17,342 ಜನರಿಗೆ ಸೋಂಕು ಪತ್ತೆಯಾಗಿದ್ದು, 149 ಜನರು ಮೃತಪಟ್ಟಿದ್ದಾರೆ.

ಈವರೆಗೆ ಒಟ್ಟು 14,283 ಜನರು ಮೃತಪಟ್ಟಂತಾಗಿದೆ. ಸೋಂಕಿತರಲ್ಲಿ 10,55,612 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,34,483 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರು ನಗರದಲ್ಲಿ 17,342, ಬೆಂಗಳೂರು ಗ್ರಾಮಾಂತರದಲ್ಲಿ 684, ತುಮಕೂರಿನಲ್ಲಿ 1,559 ಸೋಂಕಿತರು ಪತ್ತೆಯಾಗಿದ್ದಾರೆ. ಬಳ್ಳಾರಿ 731, ಬಾಗಲಕೋಟೆ 105, ಬೆಳಗಾವಿ 313, ಬೀದರ್ 365, ಚಾಮರಾಜನಗರ 295, ಚಿಕ್ಕಬಳ್ಳಾಪುರ 506, ಚಿಕ್ಕಮಗಳೂರು 185, ಚಿತ್ರದುರ್ಗ 114, ದಕ್ಷಿಣ ಕನ್ನಡ 517, ದಾವಣಗೆರೆ 254, ಧಾರವಾಡ 385, ಗದಗ 76, ಹಾಸನ 823, ಹಾವೇರಿ 92, ಕಲಬುರಗಿ 791, ಕೊಡಗು 196, ಕೋಲಾರ 373, ಕೊಪ್ಪಳ 266, ಮಂಡ್ಯ 688, ಮೈಸೂರು 536, ರಾಯಚೂರು 497, ರಾಮನಗರ 385, ಶಿವಮೊಗ್ಗ 266, ಉಡುಪಿ 403, ಉತ್ತರ ಕನ್ನಡ 185, ವಿಜಯಪುರ 411, ಯಾದಗಿರಿ 95 ಸೋಂಕಿತರು ಪತ್ತೆಯಾಗಿದ್ದಾರೆ.

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *